ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿ ಶ್ರೀಕೃಷ್ಣಮಠದ ಲಕ್ಷದೀಪೋತ್ಸವಕ್ಕೆ ಸಕಲ ಸಿದ್ದತೆ:ಉತ್ಥಾನ ದ್ವಾದಶಿಯ೦ದು ಮಧ್ಯಾಹ್ನ ಹಣತೆ ಇಡುವ ಕಾರ್ಯಕ್ರಮಕ್ಕೆ ಸ೦ಪನ್ನ…
ಉಡುಪಿ ಶ್ರೀಕೃಷ್ಣಮಠದ ಲಕ್ಷದೀಪೋತ್ಸವಕ್ಕೆ ಸಕಲ ಸಿದ್ದತೆಯನ್ನು ಮಾಡಲಾಗಿದ್ದು ಉತ್ಥಾನ ದ್ವಾದಶಿಯದಿನವಾದ ಬುಧವಾರ ಮಧ್ಯಾಹ್ನ ಹಣತೆ ಇಡುವ ಕಾರ್ಯಕ್ರಮಕ್ಕೆ ಸ೦ಪನ್ನಗೊ೦ಡಿತು.
ಕಾರ್ಯಕ್ರಮದಲ್ಲಿ ಪರ್ಯಾಯ ಶ್ರೀಕೃಷ್ಣಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು,ಕಿರಿಯ ತಿಗಳಾದ ಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರು ಸೇರಿದ೦ತೆ ಪರ್ಯಾಯ ಮಠದ ದಿವಾನರಾದ ನಾಗರಾಜ ಆಚಾರ್ಯ,ಪ್ರಸನ್ನ ಆಚಾರ್ಯ,ವಿಷ್ಣುಮೂರ್ತಿ ಉಪಾದ್ಯಾ,ಕೊಟ್ಟಾರಿಗಳಾದ ರಾಮಚ೦ದ್ರ ಕೊಡ೦ಚ, ರತೀಶ್ ತ೦ತ್ರಿ ಹಾಗೂ ಮಠದ ಶಿಷ್ಯವೃ೦ದ ಸೇರಿದ೦ತೆ ಶ್ರೀಕೃಷ್ಣ-ಮುಖ್ಯಪ್ರಾಣದೇವರ ಭಕ್ತರು ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.