ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ದೆಹಲಿ ವಕ್ಫ್ ಪ್ರಕರಣ; ಎಎಪಿ ಶಾಸಕ ಅಮಾನತುಲ್ಲಾ ಖಾನ್‌ಗೆ ರಿಲೀಫ್! ನ್ಯಾಯಾಂಗ ಬಂಧನದಿಂದ ಬಿಡುಗಡೆಗೆ ಕೋರ್ಟ್ ಆದೇಶ

ನವದೆಹಲಿ: ದೆಹಲಿ ವಕ್ಫ್‌ ಬೋರ್ಡ್‌ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಪ್‌ ಶಾಸಕ ಅಮಾನತುಲ್ಲಾ ಖಾನ್‌ ಅವರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡುವಂತೆ ಇಲ್ಲಿನ ನ್ಯಾಯಾಲಯ ಗುರುವಾರ ಆದೇಶಿಸಿದ್ದು, ಅವರ ವಿರುದ್ಧ ಸಲ್ಲಿಸಲಾಗಿರುವ ಚಾರ್ಜ್‌ಶೀಟ್‌ನ ವಿಚಾರಣೆಗೆ ನಿರಾಕರಿಸಿದೆ.

ಖಾನ್ ವಿರುದ್ಧ ಮುಂದುವರೆಯಲು ಸಾಕಷ್ಟು ಸಾಕ್ಷ್ಯಾಧಾರಗಳಿದ್ದರೂ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಯಾವುದೇ ಅನುಮತಿ ನೀಡಲಾಗದು ಎಂದು ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಹೇಳಿದರು.

ಒಂದು ಲಕ್ಷ ರೂ. ಜಾಮೀನು ಬಾಂಡ್ ಮತ್ತು ಅಷ್ಟೇ ಮೊತ್ತದ ಶ್ಯೂರಿಟಿ ಆಧಾರದ ಮೇಲೆ ಖಾನ್ ಅವರನ್ನು ತಕ್ಷಣವೇ ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡುವಂತೆ ನ್ಯಾಯಾಲಯ ಸೂಚಿಸಿದೆ.

ಅಮಾನತುಲ್ಲಾ ಖಾನ್ ಅವರು ದೆಹಲಿ ವಕ್ಫ್ ಬೋರ್ಡ್‌ನಲ್ಲಿ ಭ್ರಷ್ಟಾಚಾರದ ಮೂಲಕ ಗಳಿಸಿದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಕ್ಟೋಬರ್ 29 ರಂದು 110 ಪುಟಗಳ ಮೊದಲ ಪೂರಕ ಪ್ರಾಸಿಕ್ಯೂಷನ್ ದೂರನ್ನು (ಇಡಿ ಚಾರ್ಜ್‌ಶೀಟ್‌ಗೆ ಸಮನಾಗಿರುತ್ತದೆ) ಸಲ್ಲಿಸಿತ್ತು.

ಚಾರ್ಜ್‌ಶೀಟ್‌ನಲ್ಲಿ ಮರಿಯಮ್ ಸಿದ್ದಿಕಿ ಎಂಬುವರನ್ನು ಹೆಸರಿಸಲಾಗಿತ್ತು. ಅವರು ಪ್ರಕರಣದಲ್ಲಿ ಆರೋಪಿಯಾಗಿದ್ದರೂ ಇಡಿ ಅವರನ್ನು ಬಂಧಿಸಿಲ್ಲ. ಸಿದ್ದಿಕಿ ವಿರುದ್ಧ ಮುಂದುವರಿಯಲು ಯಾವುದೇ ಪುರಾವೆಗಳಿಲ್ಲ ಎಂದು ನ್ಯಾಯಾಲಯ ಹೇಳಿದ್ದು, ಆಕೆಯನ್ನು ಬಿಡುಗಡೆ ಮಾಡಿದೆ. ಅಮಾನತುಲ್ಲಾ ಖಾನ್ ಅವರನ್ನು ಸೆಪ್ಟಂಬರ್ 2ರಂದು ಅವರ ನಿವಾಸದ ಮೇಲೆ ದಾಳಿ ನಡೆಸಿದ ನಂತರ ಇಡಿ ಬಂಧಿಸಿತ್ತು.

No Comments

Leave A Comment