ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
IAS ಅಧಿಕಾರಿ ಸಿ.ಶಿಖಾ ಕೇಂದ್ರ ಸೇವೆಗೆ ವರ್ಗಾವಣೆ
ಬೆಂಗಳೂರು: ರಾಜ್ಯ ಕೇಡರ್ ನ ಹಿರಿಯ ಐಎಎಸ್ ಅಧಿಕಾರಿ, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ. ಶಿಖಾ ಅವರು ಕೇಂದ್ರ ಸೇವೆಗೆ ವರ್ಗಾವಣೆಗೊಂಡಿದ್ದಾರೆ.
ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ಕಾರ್ಯದರ್ಶಿಯಾಗಿ ಸಿ. ಶಿಖಾ ನೇಮಕವಾಗಿದ್ದು, ಶೀಘ್ರವೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
2004ರ ಐಎಎಸ್ ಅಧಿಕಾರಿಯಾಗಿರುವ ಶಿಖಾ ಅವರು ಮೈಸೂರು ಜಿಲ್ಲಾಧಿಕಾರಿ, ಸೆಸ್ಕಾಂ ಎಂಡಿ, ಬೆಸ್ಕಾಂ ಎಂಡಿ, ಪಿಯು ಬೋರ್ಡ್ ನಿರ್ದೇಶಕಿ, ಬಿಎಂಟಿಸಿ, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದಾರೆ. ಅವರ ಪತಿ ಅಜಯ್ ನಾಗಭೂಷಣ್ ಕೂಡ ಐಎಎಸ್ ಅಧಿಕಾರಿಯಾಗಿದ್ದಾರೆ.