ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಬೋಳ: ಮನೆಗೆ ದಾಳಿ ನಡೆಸಿದ ಅಬಕಾರಿ ಇಲಾಖೆ : ಲಕ್ಷಾಂತರ ರೂ. ಮೌಲ್ಯದ ಅಕ್ರಮ ಮದ್ಯ ವಶಕ್ಕೆ
ಕಾರ್ಕಳ: ಬೋಳ ಗ್ರಾಮದ ಎರಡು ಮನೆಗಳಲ್ಲಿ ಗೋವಾ ರಾಜ್ಯದ ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಮದ್ಯದ ಬಾಕ್ಸ್ ಗಳನ್ನು ಅಬಕಾರಿ ಇಲಾಖೆ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ.
ಅಬಕಾರಿ ಉಪ ಆಯುಕ್ತೆ ಬಿಂದು ಅವರ ನೇತೃತ್ವದಲ್ಲಿ ಬೋಳದ ಅವಿನಾಶ್ ಮಲ್ಲಿ ಎಂಬುವವರ ಎರಡು ಮನೆಗೆ ದಾಳಿ ನಡೆಸಿದ್ದು, ದುಬಾರಿ ಮೌಲ್ಯದ ಮದ್ಯದ ಬಾಟಲಿಗಳು ಬಾಕ್ಸ್ಗಳು ಕೂಡ ಪತ್ತೆಯಾಗಿದೆ. 200 ಕ್ಕೂ ಅಧಿಕ ಬಾಕ್ಸ್ ಗಳನ್ನು ವಶಕ್ಕೆ ಪಡೆದಿದ್ದು, ಇವು ನಕಲಿ ಮದ್ಯವೋ, ಅಸಲಿ ಮದ್ಯವೋ ಎಂಬ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ.
ಗ್ರಾಮೀಣ ಭಾಗದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮದ್ಯ ದಾಸ್ತಾನು ಮಾಡಿರುವ ಬಗ್ಗೆ ಅಧಿಕಾರಿಗಳು ದಂಗಾಗಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಪರಿಶೀಲನೆ ನಡೆಯುತ್ತಿದ್ದು, ತನಿಖೆ ನಡೆಸಲಾಗುತ್ತಿದೆ. ಶೀಘ್ರ ವಿವರವಾದ ಮಾಹಿತಿ ನೀಡಲಾಗುವುದು ಎಂದು ಅಬಕಾರಿ ಡಿಸಿ ಬಿಂದು ತಿಳಿಸಿದ್ದಾರೆ.