ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಬೋಳ: ಮನೆಗೆ ದಾಳಿ ನಡೆಸಿದ ಅಬಕಾರಿ ಇಲಾಖೆ : ಲಕ್ಷಾಂತರ ರೂ. ಮೌಲ್ಯದ ಅಕ್ರಮ ಮದ್ಯ ವಶಕ್ಕೆ
ಕಾರ್ಕಳ: ಬೋಳ ಗ್ರಾಮದ ಎರಡು ಮನೆಗಳಲ್ಲಿ ಗೋವಾ ರಾಜ್ಯದ ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಮದ್ಯದ ಬಾಕ್ಸ್ ಗಳನ್ನು ಅಬಕಾರಿ ಇಲಾಖೆ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ.
ಅಬಕಾರಿ ಉಪ ಆಯುಕ್ತೆ ಬಿಂದು ಅವರ ನೇತೃತ್ವದಲ್ಲಿ ಬೋಳದ ಅವಿನಾಶ್ ಮಲ್ಲಿ ಎಂಬುವವರ ಎರಡು ಮನೆಗೆ ದಾಳಿ ನಡೆಸಿದ್ದು, ದುಬಾರಿ ಮೌಲ್ಯದ ಮದ್ಯದ ಬಾಟಲಿಗಳು ಬಾಕ್ಸ್ಗಳು ಕೂಡ ಪತ್ತೆಯಾಗಿದೆ. 200 ಕ್ಕೂ ಅಧಿಕ ಬಾಕ್ಸ್ ಗಳನ್ನು ವಶಕ್ಕೆ ಪಡೆದಿದ್ದು, ಇವು ನಕಲಿ ಮದ್ಯವೋ, ಅಸಲಿ ಮದ್ಯವೋ ಎಂಬ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ.
ಗ್ರಾಮೀಣ ಭಾಗದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮದ್ಯ ದಾಸ್ತಾನು ಮಾಡಿರುವ ಬಗ್ಗೆ ಅಧಿಕಾರಿಗಳು ದಂಗಾಗಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಪರಿಶೀಲನೆ ನಡೆಯುತ್ತಿದ್ದು, ತನಿಖೆ ನಡೆಸಲಾಗುತ್ತಿದೆ. ಶೀಘ್ರ ವಿವರವಾದ ಮಾಹಿತಿ ನೀಡಲಾಗುವುದು ಎಂದು ಅಬಕಾರಿ ಡಿಸಿ ಬಿಂದು ತಿಳಿಸಿದ್ದಾರೆ.