ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಕರ್ನಾಟಕ ರಕ್ಷಣಾ ವೇದಿಕೆಯ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರಾಗಿ ರವಿ.ಕೆ ಹೆಮ್ಮಾಡಿ ಆಯ್ಕೆ

ಕು೦ದಾಪುರ:ಶನಿವಾರ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಕುಂದಾಪುರ ತಾಲೂಕು ಘಟಕ ಅಧ್ಯಕ್ಷರಾಗಿ ರವಿ.ಕೆ ಹೆಮ್ಮಾಡಿ ರನ್ನು ಕರ್ನಾಟಕ ರಕ್ಷಣಾ ವೇದಿಕೆಯ ಕುಂದಾಪುರ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಇಂದು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಆಯ್ಕೆಯಾದ ರವಿ.ಕೆ ಹೆಮ್ಮಾಡಿ ರನ್ನು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿರವರು ಸಂಘಟನೆಯ ಶಾಲು ಹೊದಿಸಿ ಹೂ ಗುಚ್ಛ ನೀಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಜಿಲ್ಲಾ ಸಲಹೆಗಾರರು ಪ್ರಕಾಶ್ ದೇವಾಡಿಗ,ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಲ್ಫೋನ್ಸ್. ಗೋಪಾಲ್ ದೊರೆ, ಜಿಲ್ಲಾ ಮಹಿಳಾ ಉಪಾಧ್ಯಕ್ಷರು ಶ್ರೀಮತಿ ದೇವಕಿ ಬಾರ್ಕೂರು, ಜಿಲ್ಲಾ ಕಾರ್ಯದರ್ಶಿಯಾದ ಶ್ರೀಮತಿ ಮೋಹಿನಿ. ಜಿಲ್ಲಾ ಸದಸ್ಯರಾದ ಜೋಯಲ್. ಪ್ರವೀಣ್ ಉಪಸ್ಥಿತರಿದ್ದರು.

No Comments

Leave A Comment