ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಕುಮಟಾ- ಶಿರಸಿ ರಸ್ತೆ ಸಂಚಾರ ಡಿಸೆಂಬರ್ 2ರಿಂದ ಫೆಬ್ರವರಿ 25ರವರೆಗೆ ಬಂದ್
ಶಿರಸಿ: ಡಿಸೆಂಬರ್ 2ರಿಂದ ಫೆಬ್ರವರಿ 25ರವರೆಗೆ ರಾಷ್ಟ್ರೀಯ ಹೆದ್ದಾರಿ 766E ಬಂದ್ ಆಗಲಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ-ಶಿರಸಿ ನಡುವಿನ NH 766E ಬಂದ್ ಆಗಲಿದೆ. ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಎಸ್ಪಿ ಎಂ. ನಾರಾಯಣ ಪ್ರಕಟಣೆ ಹೊರಡಿಸಿದ್ದಾರೆ. ಹೀಗಾಗಿ, ಈ ಮಾರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಬೇರೆ ಮಾರ್ಗದಲ್ಲಿ ಸಂಚರಿಸುವುದು ಉತ್ತಮ.
ಉತ್ತರ ಕನ್ನಡ ಜಿಲ್ಲಾಧಿಕಾರಿಯಾದ ಲಕ್ಷ್ಮೀಪ್ರಿಯಾ ಅವರ ಸೂಚನೆ ಮೇರೆಗೆ ಎಸ್ಪಿ ನಾರಾಯಣ ಈ ಕ್ರಮ ಕೈಗೊಂಡಿದ್ದಾರೆ. ಬದಲಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಸೂಚನೆ ನೀಡಿದೆ. ರಾಷ್ಟ್ರೀಯ ಹೆದ್ದಾರಿ 766Eನಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆಯನ್ನು ಬಂದ್ ಮಾಡಲಾಗುವುದು. ಶಿರಸಿ-ಕುಮಟಾ ಪ್ರಯಾಣಿಕರಿಗೆ ಸಿದ್ದಾಪುರ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು.
ಹಾಗೇ, ಅಂಕೋಲಾ-ಶಿರಸಿ ಮೂಲಕ ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿ 63ಯಲ್ಲಿ ಸಂಚರಿಸಬಹುದು. ಹಾಗೂ ರಾಜ್ಯ ಹೆದ್ದಾರಿ 93ರಲ್ಲಿ ಎಲ್ಲ ಮಾದರಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು. ಮಂಗಳೂರು-ಹೊನ್ನಾವರ-ಶಿರಸಿ ಮೂಲಕ ವಾಹನಗಳ ಸಂಚಾರಕ್ಕೆ ಅವಕಾಶವಿದೆ. ಸಿದ್ದಾಪುರ-ಮಾವಿನಗುಂಡಿ ಮಾರ್ಗವಾಗಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.