ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಮೂಲ್ಕಿ : ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಂಟೈನರ್ – ತಪ್ಪಿದ ಅನಾಹುತ

ಕಂಟೈನರ್ ನ ಬ್ರೇಕ್ ಲೈನರ್ ಜಾಮ್ ಆಗಿ ಬೆಂಕಿ ಕಾಣಿಸಿಕೊಂಡು ಟಯರ್ ಮೇಲ್ಗಡೆ ಹೊತ್ತಿ ಉರಿದಿದ್ದು ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಲ್ಕಿ ಬಪ್ಪನಾಡು ಸೇತುವೆ ಬಳಿ ನಡೆದಿದೆ.

ಪಡುಬಿದ್ರೆ ನಂದಿಕೂರು ಕೈಗಾರಿಕಾ ಪ್ರದೇಶದ ಬ್ರೈಟ್ ಫ್ಲೆಕ್ಸ್ ಕಂಪನಿಯಿಂದ ಮಂಗಳೂರು ಬಂದರ್ ಕಡೆಗೆ ಪ್ಲಾಸ್ಟಿಕ್ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಕಂಟೈನರ್ ಬಪ್ಪನಾಡು ಸೇತುವೆ ತಲುಪುತ್ತಿದ್ದಂತೆ ಬ್ರೇಕ್ ಲೈನರ್ ಜಾಮ್ ಆಗಿ ಟಯರ್ ಮೇಲ್ಗಡೆ ಹೊತ್ತಿ ಉರಿದಿದೆ. ಬೆಂಕಿ ಹೊತ್ತಿ ಉರಿಯುತ್ತಿದ್ದಂತೆ ಕಂಗಾಲಾದ ಕಂಟೈನರ್ ಚಾಲಕ ಹಿಮಾಚಲ ಪ್ರದೇಶ ನಿವಾಸಿ ರಂಜಿತ್ ಕೆಳಗೆ ಹಾರಿ ಅಪಾಯದಿಂದ ಪಾರಾಗಿದ್ದಾರೆ.

ಕೂಡಲೇ ಮುಲ್ಕಿ ನ ಪಂ ಸದಸ್ಯ ಬಾಲಚಂದ್ರ ಕಾಮತ್, ಮುಲ್ಕಿ ಪೊಲೀಸ್ ಠಾಣೆಯ ಎಸ್ಐ ಅನಿತ ನೇತೃತ್ವದಲ್ಲಿ ಮುಲ್ಕಿ ಹಾಗೂ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು, ಹೆಜ್ಮಾಡಿ ಟೋಲ್ ಸಿಬ್ಬಂದಿ ಹಾಗೂ ಸ್ಥಳೀಯರು ಪೆಟ್ರೋಲ್ ಬಂಕ್ ಬಳಿಯಿಂದ ಬೆಂಕಿ ನಂದಿಸುವ ಸಾಧನವನ್ನು ತಂದು ಕೂಡಲೇ ಬೆಂಕಿ ನಂದಿಸಿದ್ದಾರೆ. ಬಳಿಕ ಹಳೆಯಂಗಡಿಯ ಪೂಜಾ ರೇಂಜರ್ಸ್ ವತಿಯಿಂದ ನೀರನ್ನು ತಂದು ಪೂರ್ತಿ ಬೆಂಕಿ ನಂದಿಸಲಾಯಿತು. ಬೆಂಕಿ ಹೊತ್ತಿ ಉರಿದರೆ ಕಂಟೈನರ್ ನ ಪೆಟ್ರೋಲ್ ಟ್ಯಾಂಕ್ ಸ್ಫೋಟವಾಗುವ ಸಾಧ್ಯತೆ ಇತ್ತು. ಅವಘಡ ಸಂದರ್ಭ ಕೆಲ ಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತ ಗೊಂಡಿದ್ದು ಪೊಲೀಸರು ತೆರವುಗೊಳಿಸಿದ್ದಾರೆ.

No Comments

Leave A Comment