ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ತೆಲಂಗಾಣದಲ್ಲಿ ಎನ್ಕೌಂಟರ್ – 7 ನಕ್ಸಲರು ಸಾವು
ಹೈದರಾಬಾದ್:ಡಿ.01 ,ಇಂದು ಬೆಳಿಗ್ಗೆ ಪೊಲೀಸರು ನಡೆಸಿದ ಎನ್ಕೌಂಟರ್ನಲ್ಲಿ ಉನ್ನತ ಕಮಾಂಡರ್ ಸೇರಿದಂತೆ ಏಳು ಮಾವೋವಾದಿಗಳು ಹತರಾಗಿದ್ದಾರೆ. ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಪೊಲೀಸ್ ಮಾಹಿತಿದಾರರು ಎಂಬ ಶಂಕೆಯಲ್ಲಿ ಇಬ್ಬರು ಬುಡಕಟ್ಟು ಯುವಕರನ್ನು ಹತ್ಯೆಗೈದ ಒಂದು ವಾರದ ನಂತರ ಈ ಘಟನೆ ನಡೆದಿದೆ.
ಗ್ರೇಹೌಂಡ್ಸ್ ಕೂಂಬಿಂಗ್ ಕಾರ್ಯಾಚರಣೆಯ ಸಮಯದಲ್ಲಿ ಮಾವೋವಾದಿ ಗುಂಪನ್ನು ಗುರುತಿಸಿ ಶರಣಾಗುವಂತೆ ಆದೇಶಿಸಿತ್ತು. ಆದಾಗ್ಯೂ, ಅವರು ಕಮಾಂಡೋಗಳತ್ತ ಗುಂಡು ಹಾರಿಸಿದರು, ಪೊಲೀಸರು ಪ್ರತಿಯಾಗಿ ಗುಂಡು ಹಾರಿಸಿದ್ದು ಏಳು ಮಾವೋವಾದಿಗಳು ಹತರಾಗಿದ್ದಾರೆ ಎಂದು ವರದಿಯಾಗಿದೆ.
ಹತ್ಯೆಯಾದವರಲ್ಲಿ ಸಿಪಿಐ (ಮಾವೋವಾದಿ) ಯೆಲ್ಲಾಂಡು-ನರ್ಸಂಪೇಟ್ ಪ್ರದೇಶ ಸಮಿತಿಯ ಕಮಾಂಡರ್ ಮತ್ತು ಅದರ ತೆಲಂಗಾಣ ರಾಜ್ಯ ಸಮಿತಿಯ ಸದಸ್ಯ ಭದ್ರು ಅಲಿಯಾಸ್ ಕುರ್ಸಂ ಮಂಗು ಅಲಿಯಾಸ್ ಪಾಪಣ್ಣ (35) ಎಂದು ಗರುತಿಸಲಾಗಿದೆ.
ಎನ್ಕೌಂಟರ್ನಲ್ಲಿ ಹತರಾದ ಇತರ ಆರು ಮಾವೋವಾದಿಗಳನ್ನು ಭದ್ರು ನೇತೃತ್ವದ ಏಗೊಲಾಪು ಮಲ್ಲಯ್ಯ(43), ಮುಸ್ಸಕಿ ದೇವಲ್(22), ಮುಸ್ಸಕಿ ಜಮುನಾ(23), ಜೈ ಸಿಂಗ್(25), ಕಿಶೋರ್(22), ಮತ್ತು ಕಾಮೇಶ್(23) ಎಂದು ಗುರುತಿಸಲಾಗಿದೆ.