ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
BJP ಶಾಸಕ Munirathna ವಿರುದ್ಧ ಮತ್ತೊಂದು FIR, 590 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಕರ್ನಾಟಕ SIT
ಬೆಂಗಳೂರು: ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಬ್ಲ್ಯಾಕ್ಮೇಲ್ ಪ್ರಕರಣ ಸಂಬಂಧ ಅವರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.
ಅಶ್ಲೀಲ ವಿಡಿಯೋ ಸೃಷ್ಟಿಸಿ ಲಗ್ಗೆರೆ ವಾರ್ಡ್ ಮಾಜಿ ಕಾರ್ಪೋರೇಟರ್ವೊಬ್ಬರ ಪತಿಗೆ ಬ್ಲ್ಯಾಕ್ಮೇಲ್ ಮಾಡಲು ಯತ್ನಿಸಿದ ಆರೋಪದ ಮೇರೆಗೆ ಶಾಸಕ ಮುನಿರತ್ನ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಶನಿವಾರ ಎಫ್ಐಆರ್ ದಾಖಲಾಗಿದೆ.
ಮೂಲಗಳ ಪ್ರಕಾರ ಹಲವು ವರ್ಷಗಳಿಂದ ರಾಜಕೀಯದಲ್ಲಿ ನಾರಾಯಣಸ್ವಾಮಿ ಇದ್ದು, ಒಂದು ಬಾರಿ ಬಿಬಿಎಂಪಿ ಚುನಾವಣೆ ಯಲ್ಲಿ ಲಗ್ಗೆರೆ ವಾರ್ಡ್ನಿಂದ ಅವರ ಪತ್ನಿ ಮಂಜುಳಾ ಆಯ್ಕೆಯಾಗಿದ್ದರು. ಆರ್ಆರ್ ನಗರ ಕ್ಷೇತ್ರ ವ್ಯಾಪ್ತಿಗೆ ಲಗ್ಗೆರೆ ಬರಲಿದ್ದು, ರಾಜಕೀಯ ಕಾರಣಗಳಿಗೆ ಸ್ಥಳೀಯ ಶಾಸಕ ಮುನಿರತ್ನ ಅವರಿಗೆ ನಾರಾಯಣಸ್ವಾಮಿ ಎದುರಾಳಿಯಾಗಿದ್ದರು.
ಈ ರಾಜಕೀಯ ದ್ವೇಷ ಹಿನ್ನೆಲೆಯಲ್ಲಿ ನಾರಾಯಣಸ್ವಾಮಿ ಕುಟುಂಬದವರಿಗೆ ಶಾಸಕರು ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಖಾಸಗಿ ಸುದ್ದಿವಾಹಿನಿ ಮುಖ್ಯಸ್ಥ ಹಾಗೂ ವರದಿಗಾರನನ್ನು ಬಳಸಿಕೊಂಡು ನಾರಾಯಣಸ್ವಾಮಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ಗೆ ಮುನಿರತ್ನ ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿದೆ.
ಇದೀಗ ಈ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ಮುನಿರತ್ನ ಅವರಿಗೆ ಮತ್ತೆ ಬಂಧನ ಭೀತಿ ಆರಂಭವಾಗಿದ್ದು, ಈ ಸಂಬಂಧ ಸೋಮವಾರ ಮುನಿರತ್ನ ಜಾಮೀನು ಕೋರಿ ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೋರ್ಟ್ಗೆ ಜಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ
ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ವಿರುದ್ಧದ ಜಾತಿ ನಿಂದನೆ ಪ್ರಕರಣದ ತನಿಖೆ ಪೂರ್ಣಗೊಳಿಸಿ ನಗರದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ದೋಷಾರೋಪ ಪಟ್ಟಿಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಶನಿವಾರ ಸಲ್ಲಿಸಿದೆ. ಒಟ್ಟು 590 ಪುಟಗಳ ಆರೋಪ ಪಟ್ಟಿಯನ್ನು ಕೋರ್ಟ್ ಗೆ ಸಲ್ಲಿಸಲಾಗಿದೆ. ಹಾಲಿ ಮತ್ತು ಮಾಜಿ ಸಂಸದರು/ಶಾಸಕರ ವಿರುದ್ಧದ ಪ್ರಕರಣಗಳ ವಿಚಾರಣೆಗಾಗಿ ಎಸ್ಐಟಿ ಶನಿವಾರ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಮತ್ತು ರಾಮನಗರದ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೂರು ಪ್ರಕರಣಗಳನ್ನು ಎಸ್ಐಟಿ ತನಿಖೆ ನಡೆಸುತ್ತಿದೆ.
90 ಪುಟ, 53 ಸಾಕ್ಷಿಗಳ ಹೇಳಿಕೆ
ಎಸ್ಐಟಿ ಪ್ರಕಾರ, ಚಾರ್ಜ್ಶೀಟ್ನ 590 ಪುಟಗಳಲ್ಲಿ 157 ಸಾಕ್ಷ್ಯಚಿತ್ರ ಸಾಕ್ಷ್ಯಗಳಿವೆ, 53 ಸಾಕ್ಷಿಗಳನ್ನು ಪ್ರಶ್ನಿಸಲಾಗಿದೆ ಮತ್ತು 3 ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗಿದೆ. ಚಾರ್ಜ್ಶೀಟ್ನಲ್ಲಿ ಶಾಸಕರು ಜಾತಿವಾದಿ ಹೇಳಿಕೆಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ಆಡಿಯೊ ಕ್ಲಿಪ್ಪಿಂಗ್ಗಳನ್ನು ಒಳಗೊಂಡಿತ್ತು, ಅದನ್ನು ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್ಎಸ್ಎಲ್) ಕಳುಹಿಸಲಾಗಿದೆ.
ಆಡಿಯೋದಲ್ಲಿರುವ ಧ್ವನಿ ಶಾಸಕರ ಧ್ವನಿ ಮಾದರಿಗೆ ಹೊಂದಿಕೆಯಾಗುತ್ತಿದೆ ಎಂದು ತಜ್ಞರು ಖಚಿತಪಡಿಸಿದ್ದಾರೆ. ವೇಲುನಾಯಕ ನೀಡಿದ ದೂರಿನ ಮೇರೆಗೆ ವೈಯಾಲಿಕಾವಲ್ ಪೊಲೀಸರು ಸೆ.13ರಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಮಗೆ ಜಾತಿ ನಿಂದನೆ ಮಾಡಿ ಬೆದರಿಸಿದ್ದಾರೆ ಎಂದು ಆರೋಪಿಸಿ ಮುನಿರತ್ನ ವಿರುದ್ದ ವೈಯಾಲಿಕಾವಲ್ ಠಾಣೆಗೆ ಲಕ್ಷ್ಮೀದೇವಿ ನಗರ ವಾರ್ಡ್ನ ಮಾಜಿ ಕಾರ್ಪೋರೇಟರ್ ವೇಲು ದೂರು ನೀಡಿದರು. ‘ಸಾರ್ವಜನಿಕವಾಗಿ ಜಾತಿನಿಂದನೆ ಮಾಡಿ ಸಾಕ್ಷಿದಾರರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಸಿರುವ ಹಾಗೂ ಜಾತಿಗಳ ನಡುವೆ ವೈಷಮ್ಯವನ್ನುಂಟು ಮಾಡಿರುವ ಆರೋಪ ತನಿಖೆಯಲ್ಲಿ ಸಾಬೀತಾಗಿದೆ’ ಎಂದು ಎಸ್ಐಟಿ ಹೇಳಿದೆ.
ದೂರು
ತಮಗೆ ಜಾತಿ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಸೆ.13ರಂದು ವೈಯಾಲಿಕಾವಲ್ ಪೊಲೀಸ್ ಠಾಣೆಗೆ ವೇಲು ನಾಯ್ಕರ್ದೂರು ನೀಡಿದ್ದರು. ಈ ದೂರಿನ ಅನ್ವಯ ಮುನಿರತ್ನ ವಿರುದ್ಧಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡ (ದೌರ್ಜನ್ಯ ತಡೆ) ಕಾಯಿದೆ, 1989 ಮತ್ತು ಕಲಂ 153, 153ಎ(1) (ಎ)(ಬಿ), 504, 509 2.2.4. ರಡಿ ಎಫ್ಐಆರ್ ದಾಖಲಾಗಿತ್ತು.
ಬಳಿಕ ಮುನಿರತ್ನ ವಿರುದ್ದ ಪ್ರಕರಣಗಳ ತನಿಖೆಗೆ ಎಸ್ಐಟಿಯನ್ನು ಸರ್ಕಾರವು ರಚಿಸಿತು. ಅಂತೆಯೇ ತನಿಖೆಗಿಳಿದ ಎಸ್ಐಟಿ, ಜಾತಿ ನಿಂದನೆ ಪ್ರಕರಣದ ತನಿಖೆ ಮುಗಿಸಿ ಜನಪ್ರತಿನಿಧಿಗಳ ನ್ಯಾಯಾಲ ಯಕ್ಕೆ 590 ಪುಟಗಳ ಆರೋಪ ಪಟ್ಟಿ ಸಲ್ಲಿಸಿದೆ. ಇದರಲ್ಲಿ 53 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿ ಹೇಳಿಕೆ ದಾಖಲಿಸಿದೆ. ಈ ಸಾಕ್ಷಿಗಳ ಪೈಕಿ ಮೂವರು ಪ್ರತ್ಯಕ್ಷದರ್ಶಿಗಳು ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ ಎಂದು ಎಸ್ಐಟಿ ತಿಳಿಸಿದೆ.