ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಮಂಗಳೂರು ಏರ್ಪೋರ್ಟ್ ನಿರ್ಲಕ್ಷ್ಯದಿಂದ ಅದ್ಯಪಾಡಿಯಲ್ಲಿ ಭೂಕುಸಿತ; ಸ್ಥಳೀಯರ ಆರೋಪ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಹೆಚ್ಚಾಗಿದೆ. ಭಾರೀ ಮಳೆಯಿಂದಾಗಿ ಬಜ್ಪೆ ಸಮೀಪದ ಅದ್ಯಪಾಡಿಯಲ್ಲಿ ಭೂಕುಸಿತ ಉಂಟಾಗಿದೆ. ಬಜ್ಪೆ -ಅದ್ಯಪಾಡಿಯ ಸಂಪರ್ಕ ಕಡಿತವಾಗಿದೆ. ಅದ್ಯಪಾಡಿಯಲ್ಲಿ ಉಂಟಾಗಿರುವ ಭೂಕುಸಿತಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣ ಕೆಳಭಾಗದ ಅದ್ಯಪಾಡಿ ಪ್ರದೇಶದಲ್ಲಿ ವಿಮಾನ ನಿಲ್ದಾಣ ಭಾಗದಿಂದ ಮಣ್ಣಿನ ನೀರು ಹರಿದುಬಂದಿದೆ. ಇದರಿಂದ ಗುಡ್ಡದ ಕೆಳಭಾಗದ ಉಮಾನಾಥ ಸಾಲಿಯಾನ್ ಎಂಬುವವರ ಮನೆಗೆ ಹಾನಿಯಾಗಿದೆ. ಅದ್ಯಪಾಡಿಯ ಉಮಾನಾಥ ಸಾಲಿಯಾನ್ ಅವರ ಮನೆಯ ಮುಂಭಾಗದ ಅಂಗಳದಲ್ಲಿ ಕೆಸರು ತುಂಬಿದ ನೀರು ತುಂಬಿಕೊಂಡಿದೆ.
ಮಂಗಳೂರು ಏರ್ಪೋರ್ಟ್ ನಿರ್ಲಕ್ಷದಿಂದ ಭೂಕುಸಿತವಾಗಿದೆ ಎಂದು ಸ್ಥಳೀಯರು ಆರೋಪ ಮಾಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ತಹಶಿಲ್ದಾರ್ಗೆ ದೂರು ನೀಡಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತವಾಗಿದ್ದು, ಚಂಡಮಾರುತದಿಂದ ವಿಮಾನ ನಿಲ್ದಾಣದ ರನ್ ವೇಯಲ್ಲಿ ನೀರು ತುಂಬಿಕೊಂಡಿತ್ತು. ಅವೈಜ್ಞಾನಿಕವಾಗಿ ನೀರನ್ನು ಏರ್ಪೋರ್ಟ್ ಪ್ರಾಧಿಕಾರ ಹೊರಗೆ ಬಿಟ್ಟಿದೆ. ಏಕಾಏಕಿ ಒಂದೇ ಕಡೆ ನೀರು ಬಿಟ್ಟಿದ್ದರಿಂದ ಅವಘಡ ಉಂಟಾಗಿದೆ. ಇದರಿಂದಾಗಿಯೇ ಭೂಕುಸಿತ ಉಂಟಾಗಿ ಪ್ರವಾಹದ ನೀರು ನುಗ್ಗಿದೆ ಎಂದು ಆರೋಪಿಸಿದ್ದಾರೆ.
ಇದರಿಂದಾಗಿ ಬಜ್ಪೆ-ಅದ್ಯಪಾಡಿಯ ಸಂಪರ್ಕ ಕಡಿತವಾಗಿದೆ. ಮಂಗಳೂರು ವಿಮಾನನಿಲ್ದಾಣ ರನ್ ವೇ ಕಳಗಿನ ಅದ್ಯಪಾಡಿ ಪ್ರದೇಶದಲ್ಲಿ ವಿಮಾನ ನಿಲ್ದಾಣ ಭಾಗದಿಂದ ಹರಿದುಬಂದ ಮಣ್ಣು ನೀರಿನಿಂದ ಭಾರೀ ಸಮಸ್ಯೆ ಎದುರಾಗಿದೆ. ಮನೆಯ ಮುಂಭಾಗದ ಅಂಗಳದಲ್ಲಿ ಮಣ್ಣು, ಕೆಸರು ತುಂಬಿಕೊಂಡಿದೆ.