ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ತಾಜ್‌ಮಹಲ್‌ ಸ್ಫೋಟಿಸುವುದಾಗಿ ಹುಸಿ ಬಾಂಬ್‌ ಬೆದರಿಕೆ

ಲಖನೌ: ತಾಜ್ ಮಹಲ್ ಸ್ಫೋಟಿಸುವುದಾಗಿ ಉತ್ತರ ಪ್ರದೇಶ ಪ್ರವಾಸೋದ್ಯಮ ಇಲಾಖೆಗೆ ಮಂಗಳವಾರ ಇಮೇಲ್ ಮೂಲಕ ಬೆದರಿಕೆ ಬಂದಿದ್ದು, ಪರಿಶೀಲನೆ ನಂತರ ಇದು ಹುಸಿ ಬಾಂಬ್ ಬೆದರಿಕೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳವನ್ನು ಪ್ರೇಮಸೌಧ ತಾಜ್ ಮಹಲ್ ಅನ್ನು ತೀವ್ರ ತಪಾಸಣೆಗೆ ಒಳಪಡಿಸಿದ್ದು, ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ ಎಂದು ಸಹಾಯಕ ಪೊಲೀಸ್ ಕಮಿಷನರ್ ಸಯ್ಯದ್ ಅರೀಬ್ ಅಹ್ಮದ್ ಅವರು ತಿಳಿಸಿದ್ದಾರೆ.

“ತಾಜ್ ಮಹಲ್ ಅನ್ನು ಸ್ಫೋಟಿಸುವು ಬೆದರಿಕೆ ಇರುವ ಇಮೇಲ್ ಅನ್ನು ಉತ್ತರ ಪ್ರದೇಶ ಪ್ರವಾಸೋದ್ಯಮ ಕಚೇರಿ ಸ್ವೀಕರಿಸಿದೆ. ಈ ಕುರಿತು ಇಲಾಖೆಯವರು ನಮಗೆ ಮಾಹಿತಿ ನೀಡಿದ ನಂತರ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಮತ್ತು ಇತರ ತಂಡಗಳು ತಾಜ್ ಮಹಲ್ ಅನ್ನು ಪರಿಶೀಲನೆ ನಡೆಸಿದ್ದು, ಇದು ಹುಸಿ ಬಾಂಬ್ ಬೆದರಿಕೆ ಎಂದು ಅಹ್ಮದ್ ಅವರು ANIಗೆ ತಿಳಿಸಿದ್ದಾರೆ.

ಈ ಸಂಬಂಧ ತಾಜಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ನಕಲಿ ಇಮೇಲ್ ಕಳುಹಿಸಿದ ವ್ಯಕ್ತಿಯನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ.

No Comments

Leave A Comment