ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಮಾಡಿದ ಫಡ್ನವಿಸ್
ಮುಂಬೈ: ದೇವೇಂದ್ರ ಫಡ್ನವಿಸ್ ನೇತೃತ್ವದ ಮಹಾಯುತಿ ಸರ್ಕಾರ ಸೋಮವಾರ ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಮಾಡಿದೆ.
ಇಂದು ವಿಧಾನಸಭೆಯಲ್ಲಿ ಶಿವಸೇನಾ ಶಾಸಕ ಉದಯ್ ಸಾಮಂತ್ ಮತ್ತು ಇತರರು ಮಂಡಿಸಿದ ವಿಶ್ವಾಸಮತ ಯಾಚನೆಯನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು.
ವಿಶ್ವಾಸಮತ ಯಾಚನೆಗೆ ಸದನ ಅನುಮೋದನೆ ನೀಡಿದೆ ಎಂದು ಸ್ಪೀಕರ್ ರಾಹುಲ್ ನಾರ್ವೇಕರ್ ಘೋಷಿಸಿದರು.
288 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿ-ಶಿವಸೇನೆ-ಎನ್ಸಿಪಿ ‘ಮಹಾಯುತಿ’ ಒಕ್ಕೂಟವು 230 ಸ್ಥಾನಗಳ ಬಹುಮತ ಹೊಂದಿದೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತ 144 ಶಾಸಕರ ಬೆಂಬಲದ ಅಗತ್ಯ ಇದೆ.
“ವಿಶ್ವಾಸಮತ ಬಹುಮತದೊಂದಿಗೆ ಅಂಗೀಕಾರವಾಗಿದೆ. ವಿಧಾನಸಭೆ ಈಗ ಮುಂದೂಡಲ್ಪಡುತ್ತದೆ ಮತ್ತು ಮಹಾರಾಷ್ಟ್ರ ರಾಜ್ಯಪಾಲರ ಭಾಷಣದ ನಂತರ ಪುನರಾರಂಭವಾಗಲಿದೆ” ಎಂದು ನಾರ್ವೇಕರ್ ವಿಧಾನಸಭೆಯಲ್ಲಿ ಹೇಳಿದರು.
ಫಡ್ನವಿಸ್ ಅವರು ಡಿಸೆಂಬರ್ 5 ರಂದು ಮೂರನೇ ಬಾರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಮುಂಬೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದ ಅದ್ಧೂರಿ ಸಮಾರಂಭದಲ್ಲಿ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.