ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಉಳ್ಳಾಲ: ಕಾರು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲೇ ಮೃತ್ಯು
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಆಡಂಕುದ್ರಿನ ಬಳಿ ಕಾರು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಢಿಕ್ಕಿ ಹೊಡೆದ ಕಾರು ಮತ್ತು ಓವರ್ಟೇಕ್ ಮಾಡುತ್ತಿದ್ದ ಇನ್ನೊಂದು ಕಾರು ಕಮರಿಗೆ ಉರುಳಿ ಬಿದ್ದಿದೆ ಎನ್ನಲಾಗಿದೆ.
ಸಾವನ್ನಪ್ಪಿದವರು ಸೇವಂತಿಗುಡ್ಡೆಯ ನಿವಾಸಿ ಕೃಷ್ಣಪ್ಪ ಅವರ ಪತ್ನಿ ಬೇಬಿ (65) ಎಂದು ತಿಳಿದು ಬಂದಿದೆ.
ಆಡಂಕುದ್ರಿನಲ್ಲಿ ಅಂಗಡಿ ಹೊಂದಿದ್ದ ಅವರು ಸಂಜೆ ಪಂಪ್ವೆಲ್ನ ಅಪಾರ್ಟ್ ಮೆಂಟ್ನಲ್ಲಿ ಕೆಲಸಕ್ಕೆ ತೆರಳಲು ರಸ್ತೆ ದಾಟುತ್ತಿದ್ದಾಗ ಘಟನೆ ನಡೆದಿದೆ. ಓವರ್ಟೇಕ್ ಭರದಲ್ಲಿದ್ದ ತೊಕ್ಕೊಟ್ಟಿನಿಂದ ಮಂಗಳೂರು ಕಡೆ ಸಂಚರಿಸುತ್ತಿದ್ದ ಎರಡು ಕಾರುಗಳಲ್ಲಿ ಒಂದು ಕಾರು ಮಹಿಳೆಗೆ ಢಿಕ್ಕಿಯಾಗಿದೆ.
ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.