ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಛತ್ತೀಸ್ಗಢ: ನಾರಾಯಣಪುರದಲ್ಲಿ ನಡೆದ ಎನ್ಕೌಂಟರ್ನಲ್ಲಿ ಏಳು ಮಾವೋವಾದಿಗಳು ಹತ
ರಾಯ್ಪುರ: ದಕ್ಷಿಣ ಛತ್ತೀಸ್ಗಢದ ಅಬುಜಮದ್ ಪ್ರದೇಶದ ನಾರಾಯಣಪುರ-ದಂತೇವಾಡದ ಅಂತರ ಜಿಲ್ಲಾ ಗಡಿಯಲ್ಲಿ ಗುರುವಾರ ನಡೆದ ಭೀಕರ ಎನ್ಕೌಂಟರ್ನಲ್ಲಿ ಕನಿಷ್ಠ ಏಳು ಮಾವೋವಾದಿ(ಸಿಪಿಐ)ಗಳನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.
“ದಕ್ಷಿಣ ಅಬುಜ್ಮದ್(ಅಪರಿಚಿತ ಭೂಮಿ) ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಕುರಿತು ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಜಿಲ್ಲಾ ಮೀಸಲು ಗಾರ್ಡ್(ಡಿಆರ್ಜಿ), ವಿಶೇಷ ಕಾರ್ಯಪಡೆ(ಎಸ್ಟಿಎಫ್) ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್ಪಿಎಫ್) ಜಂಟಿಯಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು.
ನವೆಂಬರ್ 10 ರಂದು ಆರಂಭವಾದ ಮಾವೋವಾದಿ ವಿರೋಧಿ ಶೋಧ ಕಾರ್ಯಾಚರಣೆ ಮುಂದುವರಿಯುತ್ತಿದ್ದು, ನವೆಂಬರ್ 12 ರಂದು ಬೆಳಗಿನ ಜಾವ 3 ಗಂಟೆಗೆ ಮಾವೋವಾದಿಗಳು ತಮ್ಮ ಸ್ಥಳದ ಸಮೀಪಕ್ಕೆ ಬಂದ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ಎನ್ಕೌಂಟರ್ ನಡೆಯಿತು ಎಂದು ಬಸ್ತಾರ್ನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಲ್ಲಿಯವರೆಗೆ, ಎನ್ಕೌಂಟರ್ ಸ್ಥಳದಿಂದ ಏಳು ಮಾವೋವಾದಿಗಳ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ವಶಪಡಿಸಿಕೊಂಡ ಮಾವೋವಾದಿಗಳ ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ಹೇಳಿದ್ದಾರೆ.
ಈ ಪ್ರದೇಶದಲ್ಲಿ ಮಾವೋವಾದಿಗಳು ಗುಂಪು ಗುಂಪಾಗಿ ಸೇರುತ್ತಿದ್ದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.