ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

Pushpa-2: ನೂಕುನುಗ್ಗಲಿನಲ್ಲಿ ಮಹಿಳೆ ಸಾವು; ಕುಟುಂಬಕ್ಕೆ ಅಲ್ಲು ಅರ್ಜುನ್ 25 ಲಕ್ಷ ರೂ ನೆರವು ಘೋಷಣೆ

ಹೈದರಾಬಾದ್: ಪುಷ್ಪ-2: ದಿ ರೂಲ್ ಸಿನಿಮಾದ ಪ್ರೀಮಿಯರ್ ಶೋ ವೇಳೆಯಲ್ಲಿ ಉಂಟಾದ ನೂಕುನುಗ್ಗಲಿನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದ ಮಹಿಳೆಯ ಕುಟುಂಬಕ್ಕೆ ರೂ. 25 ಲಕ್ಷ ಆರ್ಥಿಕ ನೆರವನ್ನು ನಟ ಅಲ್ಲು ಅರ್ಜುನ್ ಘೋಷಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಿಡಿಯೋ ಫೋಸ್ಟ್ ಮಾಡಿರುವ ಅಲ್ಲು ಅರ್ಜುನ್, ಈ ನೋವಿನ ಪರಿಸ್ಥಿತಿಯಲ್ಲಿ ದುಃಖಿತ ಕುಟುಂಬಕ್ಕೆ ಅವರು ಒಬ್ಬಂಟಿಯಾಗಿಲ್ಲ ಎಂದು ಭರವಸೆ ನೀಡಲು ಬಯಸುತ್ತೇನೆ. ಅವರ ಕುಟುಂಬವನ್ನು ವೈಯಕ್ತಿಕವಾಗಿ ಭೇಟಿಯಾಗುವುದಾಗಿ ಹೇಳಿದ್ದಾರೆ.
ನಾವು ಏನೇ ಮಾಡಿದರೂ, ಈ ನಷ್ಟವನ್ನು ತುಂಬಿಸಲಾಗದು. ನಾವು ಭಾವನಾತ್ಮಕವಾಗಿ ನಿಮ್ಮೊಂದಿಗೆ ಇದ್ದೇವೆ ಎಂದು ಹೇಳಲು ಬಯಸುತ್ತೇನೆ. ನಿಮಗೆ ಏನೇ ಸಹಾಯ ಬೇಕಾದರೂ ನಾವಿದ್ದೇವೆ.ಸಂತ್ರಸ್ತೆಯ ಮಕ್ಕಳ ಭವಿಷ್ಯಕ್ಕಾಗಿ ನನ್ನ ಪರವಾಗಿ ರೂ. 25 ಲಕ್ಷ ನೆರವು ನೀಡಲು ಬಯಸುತ್ತೇನೆ. ಯಾವುದೇ ರೀತಿಯ ನೆರವಿಗೂ ಅವರೊಂದಿಗೆ ಇರುತ್ತೇನೆ ಎಂದು ಹೇಳಿ ಸಂತಾಪ ಸೂಚಿಸಿದ್ದಾರೆ.

ಬುಧವಾರ ಪುಷ್ಪ 2 ಪ್ರೀಮಿಯರ್ ಶೋ ವೇಳೆ ಇಲ್ಲಿನ ಸಂಧ್ಯಾ ಚಿತ್ರಮಂದಿರಕ್ಕೆ ಬಂದಿದ್ದ ನಟ ಅಲ್ಲು ಅರ್ಜುನ್ ಅವರನ್ನು ನೋಡಲು ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರಿಂದ ಉಂಟಾದ ನೂಕುನುಗ್ಗಲಿನಲ್ಲಿ 35 ವರ್ಷದ ಮಹಿಳೆ ಮೃತಪಟ್ಟಿದ್ದರು. ಅವರ 9 ವರ್ಷದ ಮಗ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

No Comments

Leave A Comment