ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣ; ನಟ ಅಲ್ಲು ಅರ್ಜುನ್ಗೆ 14 ದಿನ ನ್ಯಾಯಾಂಗ ಬಂಧನ
‘ಪುಷ್ಪ 2’ ಪ್ರೀಮಿಯರ್ ವೇಳೆ ಹೈದರಾಬಾದ್ನ ಸಂಧ್ಯಾ ಥಿಯೇಟರ್ ಬಳಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ ನಿಧನ ಹೊಂದಿದ್ದಳು. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಕೂಡ ಆರೋಪಿ ಆಗಿದ್ದು, ಅವರಿಗೆ ಸಂಕಷ್ಟ ಹೆಚ್ಚುತ್ತಿದೆ. ಅಲ್ಲು ಅರ್ಜುನ್ ಅವರನ್ನು ಇಂದು (ಡಿಸೆಂಬರ್ 13) ಮುಂಜಾನೆ ಬಂಧಿಸಿದ್ದು ಸಾಕಷ್ಟು ಸಂಚಲನ ಸೃಷ್ಟಿ ಮಾಡಿತ್ತು. ಈ ಬೆನ್ನಲ್ಲೇ ಅವರನ್ನು ಪೊಲೀಸರು ಕೋರ್ಟ್ಗೆ ಹಾಜರು ಪಡಿಸಿದ್ದಾರೆ. ಅವರನ್ನು, 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ನಾಂಪಲ್ಲಿ ಕೋರ್ಟ್ ಆದೇಶ ನೀಡಿದೆ. ‘ಪುಷ್ಪ 2’ ಗೆಲುವಿನ ಖುಷಿಯಲ್ಲಿ ಇದ್ದ ಅವರು, ಈಗ ಜೈಲು ಪಾಲಾಗಿದ್ದಾರೆ.