ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಅತುಲ್​ ಸುಭಾಷ್​ ಆತ್ಮಹತ್ಯೆ ಪ್ರಕರಣ: ಪತ್ನಿ, ಭಾಮೈದ ಸೇರಿ ಮೂವರ ಬಂಧನ

ಬೆಂಗಳೂರು: ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ಅತುಲ್ ಪತ್ನಿ, ಎ1 ಆರೋಪಿ ನಿಖಿತಾ ಸಿಂಘಾನಿಯ,​ ಅತ್ತೆ ಎ2 ಆರೋಪಿ ನಿಶಾ ಸಿಂಘಾನಿಯಾ, ಭಾಮೈದ ಎ3 ಆರೋಪಿ ಅನುರಾಗ್​ನನ್ನು ಪೊಲೀಸರು ಬಂಧಿಸಿ ತಡರಾತ್ರಿ ಬೆಂಗಳೂರಿಗೆ ಕರೆತಂದಿದ್ದಾರೆ.

ಹರಿಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ ನಿಖಿತಾಳನ್ನು ಬಂಧಿಸಲಾಗಿದ್ದು, ಉತ್ತರ ಪ್ರದೇಶದ ಅಲಹಾಬಾದ್​ನಲ್ಲಿ ನಿಶಾ ಹಾಗೂ ಅನುರಾಗ್​ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮೂವರು ಆರೋಪಿಗಳನ್ನೂ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಎಲ್ಲರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪತ್ನಿ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಅತುಲ್ ಸುಭಾಷ (34 ವರ್ಷ) ಡೆತ್​ನೋಟ್​ ಬರೆದಿಟ್ಟು ಡಿಸೆಂಬರ್​ 9ರಂದು ಬೆಂಗಳೂರಿನ ಮಂಜುನಾಥ ಲೇಔಟ್​ನ ಪ್ಲಾಟ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ತನಗೆ ಪತ್ನಿ ಮತ್ತು ಆಕೆಯ ಸಂಬಂಧಿಕರು ನೀಡಿರುವ ಕಿರುಕುಳದ ಬಗ್ಗೆ 90 ನಿಮಿಷಗಳ ವಿಡಿಯೋ ಮಾಡಿ, ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಹರಿಬಿಟ್ಟಿದ್ದರು. ಈ ಸಂಬಂಧ ಮಾರತ್ತಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

kiniudupi@rediffmail.com

No Comments

Leave A Comment