ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿಗೆ ಚಾಲನೆ

ಉಡುಪಿ : ಸುಮಾರು 1.2 ಕಿ.ಮೀ ಉದ್ದದ, 23.53 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ನಡೆಯಲಿದೆ. 18 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಶನಿವಾರ ವಸಂತ ಮಂಟಪದಲ್ಲಿ ನಡೆದ ಅಂಬಲಪಾಡಿ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕುರಿತ ಸಾರ್ವಜನಿಕ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದ್ದರು. ಅಂಬಲಪಾಡಿ ಮೇಲ್ಸೇತುವೆ ಹಾಗೂ ಅಂಡರ್ಪಾಸ್ ಕಾಮಗಾರಿಗೆ ಅಧಿಕಾರಿಗಳು ತಿಳಿಸಿದಂತೆ ಇಂದಿನಿಂದಲೇ ಚಾಲನೆ ಸಿಕ್ಕಿದೆ.

ಈಗಾಗಲೇ ಅಂಬಾಲ್ಪಡಿ ಜಂಕ್ಷನ್ ಎರಡು ಬದಿಯಲ್ಲಿ ರಸ್ತೆಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ಸಂಚಾರ ನಿರ್ಬಂಧಿಸಿದ್ದಾರೆ. ಆದರೇ, ಸಾರ್ವಜನಿಕರು ಬದಲಿ ವ್ಯವಸ್ಥೆ ಬಗ್ಗೆ ಗೊಂದಲದಲ್ಲಿದ್ದು, ಅಂಬಲಪಾಡಿ ಹಾಗೂ ಬ್ರಹ್ಮಗಿರಿ ಸಂಪರ್ಕಿಸುವ ಬದಲಿ ವ್ಯವಸ್ಥೆ ಬಗ್ಗೆ ಯಾವುದೇ ಸೂಚನೆಗಳನ್ನು ನೀಡದ ಕಾರಣ ಈ ಭಾಗದಲ್ಲಿ ಟ್ರಾಫಿಕ್ ಜಾಮ್ ಆಗುತ್ತದೆ ಎಂದು ಸ್ಥಳೀಯರು ದೂರಿದ್ದಾರೆ.

ಬ್ರಹ್ಮಗಿರಿಯಿಂದ ಅಂಬಲಪಾಡಿ ಕ್ರಾಸ್ ಆಗುವ ಬದಲಿ ವ್ಯವಸ್ಥೆಯ ಬಗ್ಗೆ ಯಾವುದೇ ಸೂಚನೆಗಳನ್ನು ನೀಡದ ಕಾರಣ ಬೆಳಿಗ್ಗೆ ಮತ್ತು ಸಂಜೆ ಸಮಯ ವಾಹನದಟ್ಟಣೆ ಹೆಚ್ಚಾಗಿ ಸವಾರರಿಗೆ ತೀವ್ರ ತೊಂದರೆಯಾಗಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

kiniudupi@rediffmail.com

No Comments

Leave A Comment