ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಹೊಸ ವರ್ಷಕ್ಕೆ ಶುಭಸುದ್ದಿ: ಪುರಿ ಜಗನ್ನಾಥ, ದ್ವಾರಕಾ, ದಕ್ಷಿಣದ ಕ್ಷೇತ್ರಗಳ ಯಾತ್ರೆಗೆ ಸಹಾಯಧನ ಘೋಷಣೆ, ಇಲ್ಲಿದೆ ವಿವರ
ಬೆಂಗಳೂರು, ಡಿಸೆಂಬರ್ 19: ಕರ್ನಾಟಕದ ಭಕ್ತರಿಗೆ, ತೀರ್ಥಯಾತ್ರಿಕರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸ ವರ್ಷ ಗಿಫ್ಟ್ ನೀಡಿದೆ. ಇದೇ ಮೊದಲ ಬಾರಿಗೆ ಮೂರು ಟೂರ್ ಪ್ಯಾಕೇಜ್ಗಳಿಗೆ ಸಬ್ಸಿಡಿ ಘೋಷಣೆ ಮಾಡಲಾಗಿದೆ. ಪುರಿ ಜಗನ್ನಾಥ, ದ್ವಾರಕಾ ಹಾಗೂ ದಕ್ಷಿಣದ ಕ್ಷೇತ್ರಗಳಿಗೆ ತೆರಳುವವರಿಗೆ ಸಹಾಯಧನ ಘೋಷಣೆ ಮಾಡಿ ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ.
ದಕ್ಷಿಣದ ತೀರ್ಥಯಾತ್ರಾ ಸ್ಥಳಗಳು ಯಾವುವೆಲ್ಲ?
ರಾಮೇಶ್ವರ, ಕನ್ಯಕುಮಾರಿ, ಮಧುರೈ, ತಿರುವನಂತಪುರಂಗೆ ಆರು ದಿನಗಳ ತೀರ್ಥಯಾತ್ರೆ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಒಟ್ಟು 25,000 ರೂ. ವೆಚ್ಚವಾಗುತ್ತದೆ. ಈ ಪೈಕಿ ಸರ್ಕಾರದಿಂದ 10,000 ರೂ. ಸಬ್ಸಿಡಿ ದೊರೆಯಲಿದೆ. 5,000 ರೂ. ಸಹಾಯಧನ ಸೇರಿ 15000 ರೂ. ಭರಿಸಲಾಗುತ್ತದೆ. ಯಾತ್ರಾರ್ಥಿಗಳು 10,000 ರೂ. ಮಾತ್ರ ಕೊಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ದ್ವಾರಕಾ ಯಾತ್ರೆ, ಪುರಿ ಜಗನ್ನಾಥ ದರ್ಶನ ಪ್ಯಾಕೇಜ್ ವಿವರ
ದ್ವಾರಕಾ ನಾಗೇಶ್ವರ-ಸೋಮನಾಥ್-ತ್ರಯಂಬಕೇಶ್ವರ ಒಳಗೊಂಡ 8 ದಿನಗಳ ಯಾತ್ರಾ ಪ್ಯಾಕೇಜ್ ಇರಲಿದೆ. ಪುರಿ- ಕೊನಾರ್ಕ್, ಗಂಗಾಸಾಗರ್, ಕೊಲ್ಕತ್ತಾ ಒಳಗೊಂಡ 8 ದಿನಗಳ ಯಾತ್ರಾ ಪ್ಯಾಕೇಜ್ ಒಟ್ಟು ಮೊತ್ತ 32,500 ರೂ. ಆಗಿದೆ. ಈ ಪೈಕಿ 17,500 ರೂ. ಸರ್ಕಾರದಿಂದ ಭರಿಸಲಾಗುತ್ತದೆ. ಉಳಿದ 15,000 ರೂ. ಮಾತ್ರ ಯಾತ್ರಿಕರು ಪಾವತಿಸಬೇಕು.
ಏನೇನು ವಿಶೇಷ ಸೌಲಭ್ಯಗಳಿವೆ?
ಪ್ರಯಾಣಿಸುವಾಗ ಟ್ರೈನ್ ಪ್ಯಾಂಟ್ರಿ ಕಾರಿನಲ್ಲಿ ತಯಾರಿಸಿದ ತಾಜಾ ಆಹಾರವನ್ನು ನೀಡಲಾಗುತ್ತದೆ. ಈ ಪ್ಯಾಕೇಜ್ನಲ್ಲಿ 3ಟೈರ್ ಎಸಿ ರೈಲಿನಲ್ಲಿ ಪ್ರಯಾಣಿಸಬಹುದು. ಊಟ, ವಸತಿ, ಸ್ಥಳೀಯ ಸಾರಿಗೆ ಹಾಗೂ ದರ್ಶನ ವ್ಯವಸ್ಥೆ ಇರುತ್ತದೆ. ಯಾತ್ರಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ವೈದ್ಯಕೀಯ ಸಹಾಯ ವ್ಯವಸ್ಥೆ ಇರುತ್ತದೆ. ರೈಲಿನಲ್ಲಿ ವೈದ್ಯರು, ನರ್ಸ್ಗಳ ವ್ಯವಸ್ಥೆ ಮಾಡಲಾಗಿದೆ.
ಯಾತ್ರೆಯ ರೂಟ್ ಮ್ಯಾಪ್ ಹೇಗಿರಲಿದೆ?
ದಕ್ಷಿಣ ಯಾತ್ರಿಗಳು ಹತ್ತುವ ಹಾಗೂ ಇಳಿಯುವ ಸ್ಥಳಗಳು; ಬೆಂಗಳೂರು ಸರ್ಎಂ ವಿಶ್ವೇಶ್ವರಯ್ಯ ರೈಲ್ವೆ ನಿಲ್ಣಾಣ, ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಬೀರೂರು, ತುಮಕೂರು ಆಗಿವೆ.
ಯಾತ್ರೆಯ ದಿನಾಂಕ
ಯಾತ್ರೆ ಹೊರಡುವ ದಿನಾಂಕ: 25-1-2025 ಆಗಿದ್ದು ವಾಪಸ್ ಬರುವ ದಿನಾಂಕ 30-1-2025 ಆಗಿದೆ.
ಪುರಿ ಜಗನ್ನಾಥ ದರ್ಶನ ಹಾಗೂ ದ್ವಾರಕಾ ಯಾತ್ರಿಗಳು ಹತ್ತುವ ಮತ್ತು ಇಳಿಯುವ ಸ್ಥಳಗಳು; ಬೆಂಗಳೂರು ಸರ್ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹಾವೇರಿ, ಬೆಳಗಾವಿ.
ದ್ವಾರಕಾ ಯಾತ್ರೆ ಹೊರಡುವ ದಿನಾಂಕ 06-1-2025 ಆಗಿದ್ದು, ಹಿಂತಿರುಗುವ ದಿನಾಂಕ 13-1-2025 ಆಗಿದೆ. ಪುರಿಜಗನ್ನಾಥ ದರ್ಶನಕ್ಕೆ ಹೊರಡುವ ದಿನಾಂಕ ದಿನಾಂಕ: 3-2-2025 ಆಗಿದ್ದು, ವಾಪಸಾಗುವ ದಿನಾಂಕ 10-02-2025 ಆಗಿದೆ.