ಉಡುಪಿ: ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಕಾರ್ತಿಕಮಾಸದಲ್ಲಿ ನಡೆಯಲಿರುವ ಲಕ್ಷದೀಪೋತ್ಸವವು ನವೆ೦ಬರ್ 7ರ ಶುಕ್ರವಾರದ೦ದು ಜರಗಲಿದೆ. ವನಪೂಜೆ,ಮಧ್ಯಾಹ್ನ ಪೂಜೆ,ವನಭೋಜನ,ರಾತ್ರಿಪೂಜೆ, ಕೆರೆಉತ್ಸವದೊ೦ದಿಗೆ ಪೇಟೆ ಉತ್ಸವದೊ೦ದಿಗೆ ಕಟ್ಟೆ ಪೂಜೆ,ರಾತ್ರಿ ಬೀಡಿನಗುಡ್ಡೆಯಲ್ಲಿ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.

ಫರಂಗಿಪೇಟೆ: ಟಯರ್ ಸ್ಫೋಟಗೊಂಡು ಟೆಂಪೋ ಟ್ರಾವೆಲರ್ ಪಲ್ಟಿ

ಬಂಟ್ವಾಳ:ಡಿ.19: ಬೆಂಗಳೂರಿನಿಂದ ಮಂಗಳೂರಿಗೆ ಹೂ ತರುತ್ತಿದ್ದ ಟೆಂಪೋ ಟ್ರಾವೆಲರ್ ಪಲ್ಟಿಯಾದ ಘಟನೆ ಫರಂಗಿಪೇಟೆಯಲ್ಲಿ ಗುರುವಾರ ಮುಂಜಾನೆ 7ಗಂಟೆಯ ವೇಳೆ ನಡೆದಿದೆ.

ಅಡ್ಯಾರ್ ನಲ್ಲಿ ಕಾರ್ಯಕ್ರಮ ನಿಮಿತ್ತ ಹೂ ಅಲಂಕಾರ ನಡೆಸುವುದಕ್ಕಾಗಿ ಬೆಂಗಳೂರಿನಿಂದ ಅಲಂಕಾರಿಕ ಹೂ ತುಂಬಿಸಿಕೊಂಡು ಹೊರಟಿದ್ದ ಟ್ರಾವೆಲರ್ ಫರಂಗಿಪೇಟೆ ಬರುವಷ್ಟರಲ್ಲಿ ಟಯರ್ ಬ್ಲಾಸ್ಟ್ ಆಗಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ವಾಹನದಲ್ಲಿದ್ದ ಹನ್ನೊಂದು ಮಂದಿ ಡೆಕೋರ್ ಕಾರ್ಮಿಕರು ಅದೃಷ್ಟವಶಾತ್ ಯಾವುದೇ ಗಯಾಗಳಾಗದೇ ಪಾರಾಗಿದ್ದಾರೆ. ವಾಹನ ರಸ್ತೆಗೆ ಮಗುಚಿ ಬಿದ್ದು ಅಲಂಕಾರಿಕ ಹೂ ರಸ್ತೆಯಲ್ಲೆಲ್ಲಾ ಚೆಲ್ಲಾಪಿಲ್ಲಿಯಾಗಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.

No Comments

Leave A Comment