ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಮಂಗಳೂರು: 500 ನಕಲಿ ಚಿನ್ನದ ಬಳೆ ಅಡವಿಟ್ಟು 2 ಕೋಟಿ ರೂ. ಸಾಲ ಪಡೆದ ಭೂಪ

ಮಂಗಳೂರು, ಡಿಸೆಂಬರ್​ 25: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು 2 ಕೋಟಿಗೂ ಅಧಿಕ ರೂ. ಸಾಲ ಪಡೆದು ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬಕ್ಕರ್ ಸಿದ್ದಿಕ್ ವಂಚಿಸಿದ ಆರೋಪಿ. 500 ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಅಬೂಬಕ್ಕರ್ ಸಿದ್ದಿಕ್ 2,11,89,800 ರೂ. ಸಾಲ ಪಡೆದು, ಮೋಸ ಮಾಡಿದ್ದಾನೆ. ಹೀಗಾಗಿ, ಅಬೂಬಕ್ಕರ್​ ಸಿದ್ದಿಕ್​, ಬ್ಯಾಂಕ್ ಆಡಳಿತ ಮಂಡಳಿ ಮತ್ತು ನೌಕರರ ವಿರುದ್ಧ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಮಾಜ ಸೇವಾ ಸಹಕಾರಿ ಸಂಘ ಜಿಲ್ಲೆಯಲ್ಲಿ 16 ಶಾಖೆ ಹೊಂದಿದೆ. ಮಂಗಳೂರಿನ ಪಡೀಲ್​ನ ಶಾಖೆಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿದೆ ಎಂಬ ಆರೋಪ ಕೇಳಿಬಂದಿದೆ. ಚಿನ್ನ ಪರೀಕ್ಷೆ ನಡೆಸುವ ಸರಪ, ಬ್ಯಾಂಕ್​ನ ಅಧ್ಯಕ್ಷ, ನಿರ್ದೇಶಕರು ಮ್ಯಾನೇಜರ್, ಸಿಬ್ಬಂದಿ ಸಹಕಾರದಿಂದ ಅವ್ಯವಹಾರ ನಡೆದಿದೆ ಎಂಬ ಆರೋಪವಿದೆ. ಈ ಬಗ್ಗೆ ಬ್ಯಾಂಕ್​ನ ಸದಸ್ಯರು, ಮಾಜಿ ನಿರ್ದೇಶಕ ಡಿ.ಲೋಕನಾಥ್ ದೂರಿನ ಮೇರೆಗೆ 28 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಬ್ಯಾಂಕ್​ನ ಸರಪ ವಿವೇಕ್ ಆಚಾರ್ಯನನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿ ಅಬೂಬಕ್ಕರ್ ಸಿದ್ದಿಕ್​ಗಾಗಿ ಹುಡುಕಾಟ ಮುಂದುವರೆದಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಪ್ರಕರಣ ಸಂಬಂಧ ದೂರುದಾರ ಲೋಕನಾಥ್.ಡಿ ಮಾತನಾಡಿ, ಅಬೂಬಕ್ಕರ್ ಸಿದ್ದಿಕ್ ಮೊದಲಿನಿಂದಲೂ ಬ್ಯಾಂಕ್​ನ ಗ್ರಾಹಕರಾಗಿದ್ದರು. 2023ರ ನವೆಂಬರ್ ತಿಂಗಳಿನಲ್ಲಿ ಒಂದೇ ರೀತಿಯ 500 ನಕಲಿ ಚಿನ್ನದ ಬಳೆ ಅಡವಿಟ್ಟು, ಸಾಲ ಪಡೆದಿದ್ದಾರೆ. ಸಾಲವನ್ನು ಮೂರು ತಿಂಗಳಲ್ಲಿ ತೀರಿಸಬೇಕಿತ್ತು ಎಂದು ಹೇಳಿದರು.

ಆದರೆ, ಸಾಲ ತೀರಸದೆ ಇದ್ದಾಗ, ಬ್ಯಾಂಕ್​ನ ಪ್ರಭಾರ ಮ್ಯಾನೇಜರ್​ ಅವರು ಅನುಮಾನಗೊಂಡು ಬೇರೆಯವರಿಂದ ಮರು ತಪಾಸಣೆ ನಡೆಸಿದಾಗ ಚಿನ್ನ ನಕಲಿ ಎಂದು ಗೊತ್ತಾಗಿದೆ. ತಕ್ಷಣ ಜನರಲ್ ಮ್ಯಾನೇಜರ್ ಸರಫ್​ ಅವರಿಗೆ ಪತ್ರ ಬರೆದಿದ್ದಾರೆ. ಸರಿಯಾಗಿ ಚಿನ್ನವನ್ನು ಪರೀಕ್ಷೆ ಮಾಡದ ಕಾರಣ ಬ್ಯಾಂಕ್​ಗೆ 2 ಕೋಟಿ ರೂಪಾಯಿಗೂ ಅಧಿಕ ನಷ್ಟ ಆಗಿದೆ. ನೀನು‌ ಅದನ್ನು ತಕ್ಷಣ ಪಾವತಿಸುವಂತೆ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

kiniudupi@rediffmail.com

No Comments

Leave A Comment