....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಮಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಬೀಚ್ ಉತ್ಸವ ಮುಂದೂಡಿಕೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನಲೆ ಡಿಸೆಂಬರ್ 28 ಮತ್ತು 29ರಂದು ತಣ್ಣೀರುಭಾವಿ ಬೀಚ್‌ನಲ್ಲಿ ಆಯೋಜಿಸಲಾಗಿದ್ದ ಬೀಚ್ ಉತ್ಸವವನ್ನು ದ.ಕ ಜಿಲ್ಲಾಡಳಿತ ಮುಂದೂಡಿ ಪ್ರಕಟನೆ ಹೊರಡಿಸಿದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಳು ದಿನಗಳ ಶೋಕಾಚರಣೆ ಘೋಷಿಸಿದೆ. ಇದೀಗ ಬೀಚ್ ಉತ್ಸವವನ್ನು ಮುಂದೂಡಲಾಗಿದ್ದು, ಪರಿಷ್ಕೃತ ದಿನಾಂಕಗಳನ್ನು ಜಿಲ್ಲಾಡಳಿತ ಶೀಘ್ರದಲ್ಲೇ ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.

No Comments

Leave A Comment