ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಪ್ಪಿನಂಗಡಿ : ಸ್ವೀಟ್ಸ್ ಮಳಿಗೆ ಬೆಂಕಿಗಾಹುತಿ – ಲಕ್ಷಾಂತರ ರೂಪಾಯಿ ನಷ್ಟ

ಆಕಸ್ಮಿಕವಾಗಿ ಸ್ವೀಟ್ಸ್ ಮಳಿಗೆಗೆ ಬೆಂಕಿ ಹತ್ತಿಕೊಂಡು ಲಕ್ಷಾಂತರ ರೂ. ನಷ್ಟವಾದ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಸಮತಾ ಸ್ವೀಟ್ಸ್ ಮಳಿಗೆಯಲ್ಲಿ ಸಂಭವಿಸಿದೆ.

ಮಳಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಳಿಗೆಯ ಮಾಲಕರು ಬಂದ್ ಮಾಡಿ ಮನೆಗೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ತಡರಾತ್ರಿ ಮಳಿಗೆಯಿಂದ ಹೊಗೆ ಬರುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಮಾಲಕರಿಗೆ ಮಾಹಿತಿ ತಿಳಿಸಿದ್ದಾರೆ.

ಕೂಡಲೇ ಮಾಲಕರು ಬಂದು ಬಾಗಿಲು ತೆಗೆದಾಗ ಬೆಂಕಿ ಹೊತ್ತಿಕೊಂಡು ಮಳಿಗೆ ಸಂಪೂರ್ಣ ಭಸ್ಮವಾಗಿ ಹೋಗಿತ್ತು. ಸಾರ್ವಜನಿಕರು ಬೆಂಕಿ ನಂದಿಸಲು ಹರಸಾಹಸಪಟ್ಟರು, ಬಳಿಕ ಬೆಳ್ತಂಗಡಿ ಹಾಗೂ ಪುತ್ತೂರಿನಿಂದ ಬಂದ ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಮಳಿಗೆಯಲ್ಲಿದ್ದ ಫ್ರಿಡ್ಜ್ , ಕಪಾಟುಗಳು, ಸಿಹಿತಿಂಡಿಗಳು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿವೆ ಎಂದು ಹೇಳಲಾಗಿದೆ.

No Comments

Leave A Comment