ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಸಾಲ ಕೊಡಿಸುವುದಾಗಿ ಮಹಿಳೆಯನ್ನ ಲಾಡ್ಜ್​ಗೆ ಕರೆದೊಯ್ದ, ಬಿಜೆಪಿ ಮುಖಂಡ ಅರೆಸ್ಟ್

ರಾಮನಗರ: ಸಾಲ ಕೊಡಿಸುವುದಾಗಿ ಹೇಳಿ ಲಾಡ್ಜ್​ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೋರ್ವಳು ಬಿಜೆಪಿ ಮುಖಂಡನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬ್ಯೂಟಿಷನ್ ಕೆಲಸ ಮಾಡಿಕೊಂಡಿರುವ ವಿವಾಹಿತ ಮಹಿಳೆಗೆ ಸಾಲ ಕೊಡಿಸುವುದಾಗಿ ನಂಬಿಸಿ ರಾಮನಗರದ ಲಾಡ್ಜ್​ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು. ಮಹಿಳೆ ನೀಡಿದ ಈ ದೂರಿನ ಮೇರೆಗೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸೂರನಹಳ್ಳಿಯ ಬಿಜೆಪಿ ಮುಖಂಡ ಚಲುವರಾಮು ಎನ್ನುವರನ್ನು ಸಾತನೂರು ಪೊಲೀಸರು ಬಂಧಿಸಿದ್ದಾರೆ.

ತನ್ನ ಗಂಡನ ಕಾಗದ ಪತ್ರ ಸರಿಪಡಿಸಲು ಹಣದ ಅವಶ್ಯಕತೆ ಇತ್ತು. ಆಗ ಸಾಲ‌ ಕೊಡಿಸುವುದಾಗಿ ಚಲುವರಾಮು ಭರವಸೆ ನೀಡಿದ್ದರು. ಬಳಿಕ ಸಾಲ ಕೊಡುವವರು ಬರುತ್ತಿದ್ದಾರೆ ಬನ್ನಿ ಎಂದು ಲಾಡ್ಜ್ ಗೆ ಕರೆದುಕೊಂಡು ಹೋಗಿದ್ದು, ಸಾಲ ಕೊಡುವವರ ಕಚೇರಿ ಇಲ್ಲೇ ಇದೆ ಎಂದು ಹೇಳಿದ್ದ. ಬಳಿಕ ಮತ್ತು ಬರಿಸಿ ಲಾಡ್ಜ್​ನಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ತಡೆಯೊಡ್ಡಿದ್ದಕ್ಕೆ ಕಪಾಳಕ್ಕೆ ಹೊಡೆದಿದ್ದಾಗಿ ಮಹಿಳೆ ದೂರಿದ್ದಾಳೆ.

ಅಲ್ಲದೇ ಬಳಿಕ ವಿಡಿಯೋ ಕಾಲ್ ಮಾಡಿ ನಗ್ನ ದೇಹ ತೋರಿಸುವಂತೆ ಬೆದರಿಕೆ ಹಾಕುತ್ತಿದ್ದ, ನಿನ್ನ ಖಾಸಗಿ ವಿಡಿಯೋ ಇದೆ. ಎಲ್ಲಾ ಕಡೆ ಹಾಕುತ್ತೇನೆ ಎಂದು ಬೆದರಿಕೆ ಹಾಕಿರುವುದಾಗಿ ಮಹಿಳೆ ಸಾತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನ ಮೇರೆಗೆ ಇದೀಗ ಸಾತನೂರು ಪೊಲೀಸರು, ಬಿಜೆಪಿ ಮುಖಂಡ ಚಲುವರಾಮು ಎನ್ನುವರನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

No Comments

Leave A Comment