.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಗದಗ: ಲಾಡ್ಜ್​ನಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆಗೆ ಶರಣು

ಗದಗ: ರಾಜ್ಯದಲ್ಲಿ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶುಕ್ರವಾರ ಗದಗನ ಪಲ್ಲವಿ ಲಾಡ್ಜ್​ನಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಗದಗ ನಗರದ ನಿವಾಸಿಯಾಗಿರುವ ಇಂಜಿನಿಯರ್ ಶಂಕರಗೌಡ ಪಾಟೀಲ್(54) ಅವರು ಇಂದು ಬೆಳಗ್ಗೆ 7.30ಕ್ಕೆ ಮನೆಯಿಂದ ಹೊರಬಂದಿದ್ದು, ನಗರದ ಪಲ್ಲವಿ ಲಾಡ್ಜ್​ನ ರೂಮ್ ನಂಬರ್ 513ರಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಂಕರಗೌಡ ಪಾಟೀಲ್ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದು, ಈ ಸಾವು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮೃತ ಇಂಜಿನಿಯರ್ ಸಹೋದರ ಕೃಷ್ಣಗೌಡ ಅವರು, ಇದು ಆತ್ಮಹತ್ಯೆಯಲ್ಲ. ನೇಣು ಹಾಕಿ‌ ಕೊಲೆ ಮಾಡಿದ್ದಾರೆ. ಅವರಿಗೆ ಯಾವುದೇ ಸಾಲ‌ ಇಲ್ಲ. ಸಾಕಷ್ಟು ಆಸ್ತಿ ಇದೆ. ಶಂಕರಗೌಡ ಸಾಲಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವನಲ್ಲ ಎಂದು ಹೇಳಿದ್ದಾರೆ.

No Comments

Leave A Comment