.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಕಾಸರಗೋಡು: ಸಚಿತಾ ರೈ ವಿರುದ್ಧ ದಾಖಲಾದ ಪ್ರಕರಣಗಳ ಸಂಖ್ಯೆ 20ಕ್ಕೆ ಏರಿಕೆ
ಕಾಸರಗೋಡು:ಕೇಂದ್ರ-ರಾಜ್ಯ ಸರಕಾರಗಳ ಸಂಸ್ಥೆಗಳಲ್ಲಿ ಉದ್ಯೋಗ ಕಲ್ಪಿಸುವುದಾಗಿ ನಂಬಿಸಿ ಹಲವರಿಂದ ಲಕ್ಷಾಂತರ ರೂ. ವಂಚಿಸಿದ ಪ್ರಕರಣದ ಆರೋಪಿ ಮಾಜಿ ಡಿವೈಎಫ್ಐ ಮುಖಂಡೆ, ಅಧ್ಯಾಪಕಿಯಾಗಿರುವ ಪುತ್ತಿಗೆ ಬಾಡೂರಿನ ಸಚಿತಾ ರೈ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು, ಈ ಮೂಲಕ ಸಚಿತಾ ರೈ ವಿರುದ್ಧ ದಾಖಲಾದ ಕೇಸುಗಳ ಸಂಖ್ಯೆ 20 ಕ್ಕೇರಿದೆ.
ಬಾಯಾರು ಧರ್ಮತ್ತಡ್ಕ ಕರುವಾಜೆಯ ಮರಿಯಮ್ಮತ್ ಸಪೂರ ನೀಡಿದ ದೂರಿನಂತೆ ಸಚಿತಾ ರೈ ವಿರುದ್ದ ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಸರಗೋಡು ಕೇಂದ್ರೀಯ ವಿದ್ಯಾಲಯದಲ್ಲಿ ಸೀನಿಯರ್ ಕ್ಲಾರ್ಕ್ ಉದ್ಯೋಗ ಭರವಸೆ ನೀಡಿ 13,80,000 ರೂ. ವಂಚಿಸಿದ ಆರೋಪದ ಮೇರೆಗೆ ಪ್ರಕರಣ ದಾಖಲಾಗಿದೆ. 2023 ಡಿ.13 ರಿಂದ 2024 ಎಪ್ರಿಲ್ 30 ರ ವರೆಗಿನ ಕಾಲಾವಧಿಯಲ್ಲಿ ಹಣ ನೀಡಿರುವುದಾಗಿ ದೂರದಾರರು ದೂರಿನಲ್ಲಿ ತಿಳಿಸಿದ್ದಾರೆ.