.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಮಂಗಳೂರು: ಗಣ್ಯರಿಂದ ಸಾಹಿತಿ ಡಾ.ನಾ.ಡಿಸೋಜರಿಗೆ ಅಂತಿಮ ನಮನ
ಮಂಗಳೂರು: ನಗರದ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ರವಿವಾರ ಸಂಜೆ ನಿಧನರಾಗಿರುವ ಹಿರಿಯ ಸಾಹಿತಿ ಡಾ.ನಾ. ಡಿಸೋಜರಿಗೆ ಅನೇಕ ಗಣ್ಯರು ಅಂತಿಮ ನಮನ ಸಲ್ಲಿಸಿದರು.
ಸೋಮವಾರ ಬೆಳಗ್ಗೆ ನಾ. ಡಿಸೋಜರ ಪಾರ್ಥಿವ ಶರೀರವನ್ನು ಅವರ ಸ್ವಂತ ಊರಾದ ಸಾಗರಕ್ಕೆ ಕೊಂಡೊಯ್ಯುವ ಮೊದಲು ನಗರದ ಫಾದರ್ ಮುಲ್ಲರ್ ಆಸ್ಪತ್ರೆಯ ಆವರಣದಲ್ಲಿ ಅನೇಕ ಗಣ್ಯರು ಅಂತಿಮ ದರ್ಶನ ಪಡೆದರು.
ಸಾಹಿತಿಗಳಾದ ಕುಂ.ವೀರಭದ್ರಪ್ಪ, ಡಾ.ನಾ.ದಾಮೋದರ ಶೆಟ್ಟಿ, ಡಾ.ಬಿ.ಎ.ವಿವೇಕ ರೈ, ಸಂದೇಶ ಪ್ರತಿಷ್ಠಾನದ ನಿರ್ದೇಶಕ ಫಾ.ಸುದೀಪ್ ಪೌಲ್, ಕೊಂಕಣಿ ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷ ರಾಯ್ ಕ್ಯಾಸ್ಟಲಿನೊ, ಮಂಗಳೂರು ಹೋಬಳಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರೆಮಂಡ್ ಡಿ ಕುನ್ಹ ಮೊದಲಾದವರು ಅಂತಿಮ ನಮನ ಸಲ್ಲಿಸಿದರು.
ನಾ.ಡಿ.ಸೋಜರ ಕುಟುಂಬದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಡಾ.ನಾ. ಡಿಸೋಜ ಅವರು ವಯೋಸಹಜ ಅನಾರೋಗ್ಯದಿಂದ ರವಿವಾರ ಸಂಜೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.