ಮುಂಬೈ: ವಾಟರ್ಮೆಲನ್ ನಲ್ಲಿ ಕಾದಿದ್ದ ಜವರಾಯ; ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು....ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ: ಉಗ್ರ ಶಾರಿಕ್ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್...
ಚಕ್ರತೀರ್ಥ ಸಗ್ರಿ ಶ್ರೀಉಮಾಮಹೇಶ್ವರ ದೇವಸ್ಥಾನದ ನೂತನ ಧ್ವಜ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ,ರಥೋತ್ಸವ,ಶೃವೋತ್ಸವ ಕಾರ್ಯಕ್ರಮದ ಆಮ೦ತ್ರಣ ಬಿಡುಗಡೆ
ಉಡುಪಿ:ಉಡುಪಿ ಸಮೀಪದ ಚಕ್ರತೀರ್ಥ ಸಗ್ರಿಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಉಮಾಮಹೇಶ್ವರ ದೇವಸ್ಥಾನದ ನೂತನ ಧ್ವಜ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ,ರಥೋತ್ಸವ,ಶೃವೋತ್ಸವ ಕಾರ್ಯಕ್ರಮದ ಆಮ೦ತ್ರಣ ಪತ್ರಿಕೆಯನ್ನು ಸೋಮವಾರದ೦ದು ಉಡುಪಿಯ ಶ್ರೀಕಾಣಿಯೂರು ಮಠಾಧೀಶರ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು ವಿದ್ಯುಕ್ತವಾಗಿ ಬಿಡುಗಡೆಮಾಡಿ ಶುಭಹಾರೈಸಿದರು.
ದೇವಸ್ಥಾನದ ಆಡಳಿತ ಅಧ್ಯಕ್ಷರಾದ ರುದ್ರಯ್ಯ ಕೆ ಆಚಾರ್ಯ, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಮುರಹರಿ ಕೆ ಆಚಾರ್ಯ, ಅಶ್ವಥ್ ಆರ್ ಆಚಾರ್ಯ, ದಿನೇಶ್ ಅಮೀನ್,ಆನ೦ದ ಶೇರಿಗಾರ್ ಜೀರ್ಣೋದ್ದಾರ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.