ಮಹಾರಾಷ್ಟ್ರದ ಪುಣೆ ಬಳಿಯ ಇಂದ್ರಾಯಣಿ ನದಿ ಸೇತುವೆಯೊಂದು ಭಾನುವಾರ ಕುಸಿದು ಬಿದಿದ್ದು, ನಾಲ್ವರು ಪ್ರವಾಸಿಗರು ಮೃತಪಟ್ಟಿರುವುದಾಗಿ ವರದಿಯಾಗಿದೆ......

ಮಂಗಳೂರು : ಜಿಲ್ಲಾ ಕಾರಾಗೃಹಕ್ಕೆ ಮೊಬೈಲ್, ಸಿಗರೇಟ್ ಎಸೆಯಲು ಯತ್ನ – ಯುವಕನ ಬಂಧನ

ನಗರದ ಜಿಲ್ಲಾ ಕಾರಾಗೃಹದ ಆವರಣಕ್ಕೆ ಮೊಬೈಲ್ ಫೋನ್ ಮತ್ತು ಸಿಗರೇಟ್ ಎಸೆಯಲು ಯತ್ನಿಸಿದ ಆರೋಪದ ಮೇಲೆ 21 ವರ್ಷದ ಯುವಕನನ್ನು ಬಂಧಿಸಲಾಗಿದೆ.

ಆರೋಪಿಯನ್ನು ಪಂಜಿಮೊಗರು ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಆತ ಜೈಲಿನ ಗಡಿಯ ಮೇಲೆ ಕೆಂಪು ಟೇಪ್‌ನಲ್ಲಿ ಸುತ್ತಿದ ಮೊಹರು ಬಂಡಲ್‌ಗಳನ್ನು ಎಸೆಯಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಆತನ ಕೃತ್ಯವನ್ನು ಗಮನಿಸಿದ ಕೆಎಸ್‌ಐಎಸ್‌ಎಫ್ ಸಿಬ್ಬಂದಿ ಕೂಡಲೇ ಆತನನ್ನು ಬಂಧಿಸಿದ್ದಾರೆ.

ಪರಿಶೀಲನೆ ನಡೆಸಿದಾಗ, ಬಂಡಲ್‌ಗಳಲ್ಲಿ ಎರಡು ಕೀಪ್ಯಾಡ್ ಮೊಬೈಲ್ ಫೋನ್‌ಗಳು ಮತ್ತು ಎರಡು ಸಿಗರೇಟ್ ಪ್ಯಾಕೆಟ್‌ಗಳು ಇರುವುದು ಕಂಡುಬಂದಿದೆ.ಪ್ರಜ್ವಲ್ ಈ ಹಿಂದೆ ಬೇರೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ವಿಚಾರ ಬಹಿರಂಗವಾಗಿದೆ. ಬರ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

kiniudupi@rediffmail.com

No Comments

Leave A Comment