.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಶರಣಾಗಲಿರುವ ನಕ್ಸಲರು
(ನಕ್ಸಲ್ ಶರಣಾಗತಿ ಸಮಿತಿಗೆ ಹೊಸ ವರ್ಷದ ಶುಭಾಶಯದ ಕೖ ಬರಹದ ಗ್ರೀಟಿಂಗ್ ನೀಡಿ ಸ್ವಾಗತಿಸಿದ ಮುಂಡಗಾರು ಲತಾ)
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ ಶರಣಾಗಬೇಕಿದ್ದ ಆರು ಮಂದಿ ನಕ್ಸಲರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗತರಾಗಲಿದ್ದಾರೆ.
ಆರು ಜನ ನಕ್ಸಲರ ಪೋಷಕರು ಚಿಕ್ಕಮಗಳೂರು ಜಿಲ್ಲಾಡಳಿದ ಮುಂದೆ ತಮ್ಮವರನ್ನು ನೋಡಲು ಕಾತುರದಿಂದ ಕಾದಿದ್ದರು. ಆದರೆ, ದಿಢೀರ್ ಬದಲಾವಣೆ ಗೊಂಡಿದ್ದು, ಪೋಷಕರನ್ನು ಬೆಂಗಳೂರಿಗೆ ಕಳಿಸಲು ವಾಹನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಇಂದು ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗಲಿದ್ದಾರೆ. ಬೆಂಗಳೂರಿಗೆ ತೆರಳುವ ವಿಚಾರವನ್ನು ಶಾಂತಿಗಾಗಿ ನಾಗರಿಕ ವೇದಿಕೆ ಮುಖಂಡ ಕೆ.ಎಲ್.ಅಶೋಕ್ ತಿಳಿಸಿದ್ದಾರೆ.