.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಅತ್ಯಾಚಾರ ಪ್ರಕರಣ:ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್‌

ಬೆಂಗಳೂರು:ಜ.09:ಅತ್ಯಾಚಾರ ಪ್ರಕರಣದಲ್ಲಿ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ಹೈಕೋರ್ಟ್‌ ಸದ್ಯ ತಾತ್ಕಾಲಿಕ ರಿಲೀಫ್‌ ನೀಡಿದೆ.

ಪ್ರಕರಣ ರದ್ದು ಕೋರಿ ಪ್ರಜ್ವಲ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ.

ಜ.13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿಗೆ ನಿಗದಿಯಾಗಿತ್ತು. ಸದ್ಯ ಹೈಕೋರ್ಟ್ ಆದೇಶದಿಂದ ಪ್ರಜ್ವಲ್‌ಗೆ ರಿಲೀಫ್‌ ಸಿಕ್ಕಿದೆ. ಮುಂದಿನ ಆದೇಶದ ವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿ ಜ.16ಕ್ಕೆ ವಿಚಾರಣೆಯನ್ನು ಮುಂದೂಡಿದೆ.

No Comments

Leave A Comment