...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಅತ್ಯಾಚಾರ ಪ್ರಕರಣ:ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್‌

ಬೆಂಗಳೂರು:ಜ.09:ಅತ್ಯಾಚಾರ ಪ್ರಕರಣದಲ್ಲಿ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ಹೈಕೋರ್ಟ್‌ ಸದ್ಯ ತಾತ್ಕಾಲಿಕ ರಿಲೀಫ್‌ ನೀಡಿದೆ.

ಪ್ರಕರಣ ರದ್ದು ಕೋರಿ ಪ್ರಜ್ವಲ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ.

ಜ.13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿಗೆ ನಿಗದಿಯಾಗಿತ್ತು. ಸದ್ಯ ಹೈಕೋರ್ಟ್ ಆದೇಶದಿಂದ ಪ್ರಜ್ವಲ್‌ಗೆ ರಿಲೀಫ್‌ ಸಿಕ್ಕಿದೆ. ಮುಂದಿನ ಆದೇಶದ ವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿ ಜ.16ಕ್ಕೆ ವಿಚಾರಣೆಯನ್ನು ಮುಂದೂಡಿದೆ.

No Comments

Leave A Comment