.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ನ್ಯಾಯಾಲಯಕ್ಕೆ ಹಾಜರಾದ ದರ್ಶನ್, ಪವಿತ್ರಾ ಗೌಡ, ವಿಚಾರಣೆ ಮುಂದೂಡಿಕೆ
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳೆಲ್ಲರೂ ಇಂದು (ಜನವರಿ 10) ಬೆಂಗಳೂರಿನ ಸಿಸಿಎಚ್ 57ರ ಕೋರ್ಟ್ಗೆ ಹಾಜರಾಗಿದ್ದಾರೆ. ಪವಿತ್ರಾ ಗೌಡ, ಪ್ರದೋಶ್ ಸೇರಿದಂತೆ ಹಲವು ಆರೋಪಿಗಳು ನ್ಯಾಯಾಲಯಕ್ಕೆ ಮೊದಲೇ ಹಾಜರಾಗಿದ್ದರು. ನಟ ದರ್ಶನ್ ಮಾತ್ರ ತುಸು ತಡವಾಗಿ ನ್ಯಾಯಾಲಯದ ಬಳಿ ಬಂದರು. ಜಾಮೀನು ದೊರೆತ ಬಳಿಕ ಇದೇ ಮೊದಲ ಬಾರಿಗೆ ರೇಣುಕಾ ಸ್ವಾಮಿ ಕೊಲೆ ಆರೋಪಿಗಳೆಲ್ಲ ಒಟ್ಟಿಗೆ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ಜಾಮೀನು ನೀಡುವ ಸಮಯದಲ್ಲಿ ಪ್ರತಿ ತಿಂಗಳು ಆರೋಪಿಗಳು ಕೋರ್ಟ್ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಅದರಂತೆ ಶುಕ್ರವಾರ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು ಆಗಲು ದಿನಾಂಕ ನಿಗಧಿ ಮಾಡಲಾಗಿತ್ತು. ಹಾಗಾಗಿ ಇಂದು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಮೊದಲೇ ಬಂದಿದ್ದ ಪವಿತ್ರಾ ಗೌಡ, ತಮ್ಮ ವಕೀಲರೊಂದಿಗೆ ಕೋರ್ಟ್ ಆವರಣದಲ್ಲಿ ಚರ್ಚಿಸುತ್ತಾ ನಿಂತಿದ್ದರು. ಇತರೆ ಆರೋಪಿಗಳು ಸಹ ತಮ್ಮ ತಮ್ಮ ವಕೀಲರೊಡನೆ ಕೋರ್ಟ್ಗೆ ಹಾಜರಾಗಿದ್ದರು.
ದರ್ಶನ್, ನಟ ಧನ್ವೀರ್ ಜೊತೆ ಕಾರಿನಲ್ಲಿ ನ್ಯಾಯಾಲಯಕ್ಕೆ ಆಗಮಿಸಿದರು. ಅವರೊಟ್ಟಿಗೆ ವಕೀಲರು ಸಹ ಇದ್ದರು. ದರ್ಶನ್, ನ್ಯಾಯಾಲಯದ ಬಳಿ ಬಂದಾಗ ಜನ ಮತ್ತು ಮಾಧ್ಯಮಗಳು ಸುತ್ತುವರೆದರು. ದರ್ಶನ್ ಇಂದು ಕುಟುಂತ್ತ ನಡೆಯಲಿಲ್ಲ, ಬದಲಿಗೆ ಆರಾಮವಾಗಿಯೇ ನಡೆಯುತ್ತಾ ನ್ಯಾಯಾಲಯ ಸಂಕೀರ್ಣದ ಒಳಗೆ ಹೋದರು. ರೇಣುಕಾ ಸ್ವಾಮಿ ಪ್ರಕರಣದಲ್ಲಿ ಬಂಧನವಾದ ಬಳಿಕ ಇದೇ ಮೊದಲ ಬಾರಿಗೆ ದರ್ಶನ್ ಹಾಗೂ ಪವಿತ್ರಾ ಗೌಡ ಮುಖಾ-ಮುಖಿ ಆಗುತ್ತಿದ್ದಾರೆ. ಒಂದೇ ನ್ಯಾಯಾಲಯದ ಹಾಲ್ನಲ್ಲಿ ಎಲ್ಲ ಆರೋಪಿಗಳು ನ್ಯಾಯಾಧೀಶರ ಮುಂದೆ ನಿಂತು ಹಾಜರಿ ನೀಡಲಿದ್ದಾರೆ.
ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾದ ಬಳಿಕ ಹಾಜರಿ ಪಡೆದುಕೊಂಡ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿ ಆದೇಶಿಸಿದರು. ಫೆಬ್ರವರಿ 25ಕ್ಕೆ ಮತ್ತೆ ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಬೇಕಿದೆ.