ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಉಡುಪಿ ಶ್ರೀಕೃಷ್ಣಮಠದಲ್ಲಿ ತೆಪ್ಪೋತ್ಸವದೊ೦ದಿಗೆ ವಾರ್ಷಿಕ ಸಪ್ತೋತ್ಸವಕ್ಕೆ ಅದ್ದೂರಿಯ ಚಾಲನೆ…

ಉಡುಪಿ:ಜ.10: ಪರ್ಯಾಯ ಶ್ರೀಪುತ್ತಿಗೆಮಠದ ಆಶ್ರಯದಲ್ಲಿ ವಾರ್ಷಿಕ ಸಪ್ತೋತ್ಸವ ಕಾರ್ಯಕ್ರಮ ಗುರುವಾರದ೦ದು ಪ್ರಾರಂಭ ಗೊಂಡಿದೆ. ಮಧ್ವ ಸರೋವರದಲ್ಲಿ ತೆಪ್ಪೋತ್ಸವದೊ೦ದಿಗೆ ನಡೆದು ಬಳಿಕ ಎರಡು ರಥಗಳ ರಥೋತ್ಸವ ನಡೆಯಿತು.ಈ ಸ೦ದರ್ಭದಲ್ಲಿ ಆಕರ್ಷಕ ಸುಡುಮದ್ದನ್ನು ಸುಡಲಾಯಿತು.

ವಾರ್ಷಿಕ ಸಪ್ತೋತ್ಸವ ಇಂದಿನಿಂದ ಜ.15ರವರೆಗೆ ನಡೆಯಲಿದೆ. ಜ.14ರಂದು ಮಕರ ಸಂಕ್ರಮಣದಂದು ಮೂರು ತೇರು ಉತ್ಸವ ನಡೆದರೆ, ಜ.15ರಂದು ಚೂರ್ಣೋತ್ಸವ ಹಗಲು ತೇರು ನಡೆಯಲಿದೆ.

ರಥಬೀದಿಯ ಸುತ್ತಲೂ ವಿಶೇಷ ಕುಣಿತ ಭಜನೆ ‘ವೈಭವೋತ್ಸವ’ ಈ ಬಾರಿ ನಡೆಯಲಿದೆ. ಇದರೊಂದಿಗೆ ಅಹಲ್ಯಾ ಬಾಯಿ ಹೋಳ್ಕರ್ ಅವರ ಜನ್ಮತ್ರಿಶತಾಬ್ದಿ ಪ್ರಯುಕ್ತ ವಿವಿಧ ಸ್ಪರ್ಧೆಗಳು ರಾಜಾಂಗಣದಲ್ಲಿ ನಡೆಯಲಿದೆ. ಅಲ್ಲದೇ ಪ್ರತಿದಿನ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ರಾಜಾಂಗಣದಲ್ಲಿ ನಡೆಯಲಿದೆ.

 

kiniudupi@rediffmail.com

No Comments

Leave A Comment