.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ ಶ್ರೀಕೃಷ್ಣಮಠದಲ್ಲಿ ತೆಪ್ಪೋತ್ಸವದೊ೦ದಿಗೆ ವಾರ್ಷಿಕ ಸಪ್ತೋತ್ಸವಕ್ಕೆ ಅದ್ದೂರಿಯ ಚಾಲನೆ…

ಉಡುಪಿ:ಜ.10: ಪರ್ಯಾಯ ಶ್ರೀಪುತ್ತಿಗೆಮಠದ ಆಶ್ರಯದಲ್ಲಿ ವಾರ್ಷಿಕ ಸಪ್ತೋತ್ಸವ ಕಾರ್ಯಕ್ರಮ ಗುರುವಾರದ೦ದು ಪ್ರಾರಂಭ ಗೊಂಡಿದೆ. ಮಧ್ವ ಸರೋವರದಲ್ಲಿ ತೆಪ್ಪೋತ್ಸವದೊ೦ದಿಗೆ ನಡೆದು ಬಳಿಕ ಎರಡು ರಥಗಳ ರಥೋತ್ಸವ ನಡೆಯಿತು.ಈ ಸ೦ದರ್ಭದಲ್ಲಿ ಆಕರ್ಷಕ ಸುಡುಮದ್ದನ್ನು ಸುಡಲಾಯಿತು.

ವಾರ್ಷಿಕ ಸಪ್ತೋತ್ಸವ ಇಂದಿನಿಂದ ಜ.15ರವರೆಗೆ ನಡೆಯಲಿದೆ. ಜ.14ರಂದು ಮಕರ ಸಂಕ್ರಮಣದಂದು ಮೂರು ತೇರು ಉತ್ಸವ ನಡೆದರೆ, ಜ.15ರಂದು ಚೂರ್ಣೋತ್ಸವ ಹಗಲು ತೇರು ನಡೆಯಲಿದೆ.

ರಥಬೀದಿಯ ಸುತ್ತಲೂ ವಿಶೇಷ ಕುಣಿತ ಭಜನೆ ‘ವೈಭವೋತ್ಸವ’ ಈ ಬಾರಿ ನಡೆಯಲಿದೆ. ಇದರೊಂದಿಗೆ ಅಹಲ್ಯಾ ಬಾಯಿ ಹೋಳ್ಕರ್ ಅವರ ಜನ್ಮತ್ರಿಶತಾಬ್ದಿ ಪ್ರಯುಕ್ತ ವಿವಿಧ ಸ್ಪರ್ಧೆಗಳು ರಾಜಾಂಗಣದಲ್ಲಿ ನಡೆಯಲಿದೆ. ಅಲ್ಲದೇ ಪ್ರತಿದಿನ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ರಾಜಾಂಗಣದಲ್ಲಿ ನಡೆಯಲಿದೆ.

 

No Comments

Leave A Comment