ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಶಿವಮೊಗ್ಗ: The New Indian Express ಫೋಟೋ ಜರ್ನಲಿಸ್ಟ್ ಶಿವಮೊಗ್ಗ ನಂದನ್ ವಿಧಿವಶ

ಶಿವಮೊಗ್ಗ: ಖ್ಯಾತ ಫೋಟೋ ಜರ್ನಲಿಸ್ಟ್, ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಶಿವಮೊಗ್ಗ ನಂದನ್ (57) ರವಿವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.

1999ರಿಂದ ಶಿವಮೊಗ್ಗದ ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆಯ ಛಾಯಾಗ್ರಾಹಕರಾಗಿ ಕೆಲಸ ನಿರ್ವಹಿಸುತ್ತಿದ್ದ ನಂದನ್ ಗೌಡ , ಶಿವಮೊಗ್ಗ ನಂದನ್ ಎಂದೇ ಹೆಸರು ಪಡೆದಿದ್ದರು. ಛಾಯಾಗ್ರಹಣದಲ್ಲಿ ಸಾಕಷ್ಟು ಪ್ರಯೋಗಗಳ ಮೂಲಕ ಗಮನ ಸೆಳೆದಿದ್ದ ನಂದನ್ ಅವರು ತೆಗೆದ ಹಲವು ಛಾಯಾಚಿತ್ರಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದ್ದವು. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ.

 

ಸೃಜನಶೀಲ ಛಾಯಾಗ್ರಹಣಕ್ಕೆ ಹೆಸರುವಾಸಿಯಾಗಿದ್ದ ಅವರು ಸಾಮಾನ್ಯ ಜನರ ಜೀವನವನ್ನು ಸೆರೆಹಿಡಿಯುವತ್ತ ಗಮನಹರಿಸಿದರು, ಜನ ಸಾಮಾನ್ಯರ ದಿನ ನಿತ್ಯದ ಹೋರಾಟಗಳನ್ನು ಎತ್ತಿ ತೋರಿಸಿದರು. ಛಾಯಾಗ್ರಾಹಕರಾಗಿ ತಮ್ಮ ಕೆಲಸದ ಹೊರತಾಗಿ, ನಂದನ್ ಪರಿಸರ ಕಾರ್ಯಕರ್ತರಾಗಿದ್ದರು, ಪರಿಸರಕ್ಕೆ ಹಾನಿಕಾರಕ ಯೋಜನೆಗಳನ್ನು ವಿರೋಧಿಸುವುದಕ್ಕೆ ಹೆಸರುವಾಸಿಯಾಗಿದ್ದರು.

ಅವರ ವೃತ್ತಿಜೀವನದ ಅವಧಿಯಲ್ಲಿ, ಅವರು ಹಲವಾರು ರಾಜ್ಯಮಟ್ಟದ ಪ್ರಶಸ್ತಿಗಳನ್ನು ಪಡೆದಿದ್ದರು. ಅವರ ಛಾಯಾಚಿತ್ರಗಳನ್ನು ರಾಜ್ಯ ಮತ್ತು ದೇಶಾದ್ಯಂತ ಪ್ರದರ್ಶನಗಳಲ್ಲಿ ಪ್ರದರ್ಶಿಸಲಾಯಿತು. ಅವರ ಅಂತ್ಯಕ್ರಿಯೆಯನ್ನು ಶಿವಮೊಗ್ಗದ ರೋಟರಿ ಸ್ಮಶಾನದಲ್ಲಿ ನಡೆಸಲಾಯಿತು.

No Comments

Leave A Comment