....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...
ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು:ಜ.27,ಸೋಮವಾರದ೦ದು ರಾಜ್ಯದ ಮುಖ್ಯಮ೦ತ್ರಿಗಳಾದ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಯಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು ಎಂದರು.
ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ಶಿವರಾಜ್ ಕುಮಾರ್ ತಿಳಿಸಿದ್ದಾರೆ ಎಂದು ಸಿಎಂ ಹೇಳಿದರು.