....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...
ಪಿಕ್ಅಪ್ ವ್ಯಾನ್ ಹಾಗೂ ಟ್ರಕ್ ನಡುವೆ ಡಿಕ್ಕಿ, 9 ಮಂದಿ ಸಾವು, 11 ಜನರಿಗೆ ಗಾಯ
ಪಿಕ್ಅಪ್ ವ್ಯಾನ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿರುವ ಘಟನೆ ಪಂಜಾಬ್ನ ಫಿರೋಜ್ಪುರದಲ್ಲಿ ಶುಕ್ರವಾರ ನಡೆದಿದೆ. 25-30 ಜನರನ್ನು ಕರೆದೊಯ್ಯುತ್ತಿದ್ದ ಪಿಕ್ ಅಪ್ ವ್ಯಾನ್ ಗುರುಹರ್ಸಹೈ ಪ್ರದೇಶದಲ್ಲಿ ಟ್ರಕ್ಗೆ ಡಿಕ್ಕಿ ಹೊಡೆದು ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಫಿರೋಜ್ಪುರ ರಸ್ತೆಯ ಗೋಲುಕಾ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಸುಮಾರು 25-30 ಮಾಣಿಗಳು ಜಲಾಲಾಬಾದ್ಗೆ ಕಾರ್ಯಕ್ರಮಕ್ಕಾಗಿ ಪ್ರಯಾಣಿಸುತ್ತಿದ್ದರು. ಗೊಲುಕ ತಿರುವಿನಲ್ಲಿ ರಸ್ತೆ ತಡೆ ನಡೆಸುತ್ತಿದ್ದ ಕಂಟೈನರ್ ಲಾರಿಗೆ ವ್ಯಾನ್ ಡಿಕ್ಕಿ ಹೊಡೆದಿದೆ.
ಘರ್ಷಣೆಯ ಪರಿಣಾಮವು ಎಷ್ಟು ತೀವ್ರವಾಗಿತ್ತು ಎಂದರೆ ಐದು ಜನರು ತಕ್ಷಣವೇ ಸಾವನ್ನಪ್ಪಿದರು, ಇತರ ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿ ಕೊನೆಯುಸಿರೆಳೆದರು. ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಇದೇ ವೇಳೆ ಉಳಿದ ಗಾಯಾಳುಗಳಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ.