.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಗುಜರಾತ್: ಖಾಸಗಿ ಬಸ್ ಕಂದಕಕ್ಕೆ ಉರುಳಿ 7 ಸಾವು; 15 ಮಂದಿ ಗಂಭೀರ

ಗಾಂಧೀನಗರ:ಫೆ.2. ಖಾಸಗಿ ಬಸ್‌ವೊಂದು ಕಂದಕಕ್ಕೆ ಉರುಳಿ 7 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿ, 15 ಜನರು ಗಂಭೀರವಾಗಿ ಗಾಯಗೊಂಡ ಘಟನೆ ನಾಸಿಕ್-ಗುಜರಾತ್ ಹೆದ್ದಾರಿಯಲ್ಲಿ ಸಂಭವಿಸಿದೆ.

ಭಾನುವಾರ ಬೆಳಗ್ಗೆ 5.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ನಾಸಿಕ್‌ನಿಂದ ಗುಜರಾತ್‌ಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ನಾಸಿಕ್-ಗುಜರಾತ್ ಹೆದ್ದಾರಿಯ ಸಪುತಾರಾ ಘಾಟ್‌ನಲ್ಲಿ 200 ಅಡಿ ಆಳದ ಕಂದಕ್ಕೆ ಬಸ್ ಉರುಳಿದ್ದು, 7 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಮೃತಪಟ್ಟವರು ಹಾಗೂ ಗಾಯಗೊಂಡ ಪ್ರಯಾಣಿಕರು ಮಧ್ಯಪ್ರದೇಶದವರು ಎಂದು ತಿಳಿಯಲಾಗಿದ್ದು, ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪ್ರಾಥಮಿಕ ವರದಿ ತಿಳಿಸಿದೆ.

ಸದ್ಯ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಅಪಘಾತದ ಕಾರಣವನ್ನು ಪತ್ತೆಹಚ್ಚಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

No Comments

Leave A Comment