....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...
ಗುಜರಾತ್: ಖಾಸಗಿ ಬಸ್ ಕಂದಕಕ್ಕೆ ಉರುಳಿ 7 ಸಾವು; 15 ಮಂದಿ ಗಂಭೀರ
ಗಾಂಧೀನಗರ:ಫೆ.2. ಖಾಸಗಿ ಬಸ್ವೊಂದು ಕಂದಕಕ್ಕೆ ಉರುಳಿ 7 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿ, 15 ಜನರು ಗಂಭೀರವಾಗಿ ಗಾಯಗೊಂಡ ಘಟನೆ ನಾಸಿಕ್-ಗುಜರಾತ್ ಹೆದ್ದಾರಿಯಲ್ಲಿ ಸಂಭವಿಸಿದೆ.
ಭಾನುವಾರ ಬೆಳಗ್ಗೆ 5.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ನಾಸಿಕ್ನಿಂದ ಗುಜರಾತ್ಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ನಾಸಿಕ್-ಗುಜರಾತ್ ಹೆದ್ದಾರಿಯ ಸಪುತಾರಾ ಘಾಟ್ನಲ್ಲಿ 200 ಅಡಿ ಆಳದ ಕಂದಕ್ಕೆ ಬಸ್ ಉರುಳಿದ್ದು, 7 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಮೃತಪಟ್ಟವರು ಹಾಗೂ ಗಾಯಗೊಂಡ ಪ್ರಯಾಣಿಕರು ಮಧ್ಯಪ್ರದೇಶದವರು ಎಂದು ತಿಳಿಯಲಾಗಿದ್ದು, ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪ್ರಾಥಮಿಕ ವರದಿ ತಿಳಿಸಿದೆ.
ಸದ್ಯ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಅಪಘಾತದ ಕಾರಣವನ್ನು ಪತ್ತೆಹಚ್ಚಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.