...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಪುತ್ತೂರು: ಆಟೋ ರಿಕ್ಷಾ ಬೈಕ್ ಢಿಕ್ಕಿ : ಸವಾರ ಸಾವು

ಪುತ್ತೂರು: ಆಟೋರಿಕ್ಷಾ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಮುರ ಎಂಬಲ್ಲಿ ಇಂದು ಬುಧವಾರ ಸಂಭವಿಸಿದೆ.

ಮೃತ ದುರ್ದೈವಿಯನ್ನು ಪುತ್ತೂರು ತಾಲೂಕಿನ ಕೆಮ್ಮಿಂಜೆ ನಿವಾಸಿ ದಿ. ಪುರುಷೋತ್ತಮ ಎಂಬವರ ಪುತ್ರ ಚೇತನ್(44) ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

No Comments

Leave A Comment