ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಗಡಿಯಲ್ಲಿ ಭಾರತೀಯ ಸೇನೆ ಭರ್ಜರಿ ಬೇಟೆ: ಮೂವರು ಪಾಕ್ ಸೈನಿಕರು ಸೇರಿದಂತೆ 7 ನುಸುಳುಕೋರರನ್ನು ಹತ್ಯೆಗೈದ BSF ಯೋಧರು
ಶ್ರೀನಗರ: ಪಾಕಿಸ್ತಾನಿ ನುಸುಳುಕೋರರ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಎಲ್ಒಸಿ ಉದ್ದಕ್ಕೂ ಪಾಕಿಸ್ತಾನಿ ನುಸುಳುಕೋರರು ನಡೆಸಿದ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ ಎಂದು ವರದಿಯಾಗಿದೆ.
ಫೆಬ್ರವರಿ 4-5ರ ರಾತ್ರಿ ಪಾಕಿಸ್ತಾನಿಗರು ಗಡಿಯೊಳಗೆ ನುಸುಳಲು ಪ್ರಯತ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಭಾರತೀಯ ಸೇನೆ ಗಡಿ ನುಸುಳುವಿಕೆಯನ್ನು ತಡೆದಿದ್ದು ಇದೇ ವೇಳೆ 7 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಮೃತರ ಪೈಕಿ ಮೂವರು ಪಾಕಿಸ್ತಾನಿ ಸೇನಾ ಸಿಬ್ಬಂದಿ ಇದ್ದರು ಎಂದು ನಂಬಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್ನಲ್ಲಿ ಕಾಶ್ಮೀರ ಒಗ್ಗಟ್ಟಿನ ದಿನವನ್ನು ಆಚರಿಸುತ್ತಿದ್ದಾಗ, ಪಾಕಿಸ್ತಾನಿಗಳು ತಮ್ಮ ಭಾರತ ವಿರೋಧಿ ನಡೆಯನ್ನು ಮುಂದುವರಿಸಲು ಈ ಘಟನೆಯನ್ನು ನಡೆಸಿದರು. ಅದು ಭಾರತ ವಿರೋಧಿ ಕಾರ್ಯಸೂಚಿಯನ್ನು ಮುನ್ನಡೆಸುವ ಪ್ರಚಾರದ ಅಭಿಯಾನವಾಗಿತ್ತು.
ಪಾಕಿಸ್ತಾನದ ವಿಶೇಷ ಪಡೆಗಳಾದ ಬಾರ್ಡರ್ ಆಕ್ಷನ್ ಟೀಮ್ (ಬಿಎಟಿ) ಗಡಿಯನ್ನು ಪ್ರವೇಶಿಸಿದಾಗ ಭಾರತೀಯ ಸೇನೆಯು ಸೂಕ್ತ ಪ್ರತ್ಯುತ್ತರ ನೀಡಿದೆ.