37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...
ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಮತ್ತೆ ನೋಟಿಸ್
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಸೋಮವಾರ ಮತ್ತೆ ನೋಟಿಸ್ ನೀಡಿದೆ.
ಈ ಹಿಂದೆಯೂ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿತ್ತು ಮತ್ತೆ ಅವರು ಉತ್ತರ ಸಹ ನೀಡಿದ್ದರು. ಆದರೆ ವಿಜಯೇಂದ್ರ ವಿರುದ್ಧ ನಿರಂತವಾಗಿ ಹೇಳಿಕೆ ನೀಡುವುದನ್ನು ಮಾತ್ರ ನಿಲ್ಲಿಸಿಲ್ಲ. ಹೀಗಾಗಿ ಇಂದು ಮತ್ತೊಮ್ಮೆ ಯತ್ನಾಳ್ ಅವರಿಗೆ ಕಾರಣ ಕೇಳಿ ಶೋಕಾಸ್ ನೋಟಿಸ್ ನೀಡಲಾಗಿದೆ.
ಈ ನೋಟಿಸ್ ಗೆ 72 ಗಂಟೆಗಳಲ್ಲೇ ಉತ್ತರಿಸುವಂತೆ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಸೂಚಿಸಿದ್ದು, ಒಂದು ವೇಳೆ ನಿಗದಿತ ಸಮಯದಲ್ಲಿ ಉತ್ತರ ನೀಡದಿದ್ದರೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.
ದೆಹಲಿಯಲ್ಲಿದ್ದ ಯತ್ನಾಳ್ ಅವರು ಈಗ ಹೈದರಾಬಾದ್ ನತ್ತ ಪ್ರಯಾಣ ಬೆಳಸಿದ್ದು, ಬಿಜೆಪಿ ಶಿಸ್ತು ಸಮಿತಿ ನೀಡಿದ ನೋಟಿಸ್ ಇನ್ನೂ ಅವರ ಕೈಸೇರಿಲ್ಲ.