.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಶೀಘ್ರದಲ್ಲೇ ಕೆಲವು ರಾಜ್ಯಗಳ ಅಧ್ಯಕ್ಷರ ಬದಲಾವಣೆ; ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಖರ್ಗೆ ಸುಳಿವು

ಕಲಬುರಗಿ: ಈಗಾಗಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ರಾಜ್ಯ ಕಾಂಗ್ರೆಸ್‌ ನಾಯಕರು ನಡುವೆ ಪೈಪೋಟಿ ಆರಂಭವಾಗಿದ್ದು, ಈ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಮಹತ್ವದ ಸುಳಿವು ನೀಡಿದ್ದಾರೆ.

ಇಂದು ಕಲಬುರಗಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಶೀಘ್ರದಲ್ಲೇ ಕೆಲವು ರಾಜ್ಯಗಳಲ್ಲಿ ಅಧ್ಯಕ್ಷರ ಬದಲಾವಣೆ ಆಗುತ್ತದೆ. ಒಡಿಶಾದಲ್ಲಿ ಅಧ್ಯಕ್ಷರ ಬದಲಾವಣೆ ಮಾಡಿ ಬಂದಿದ್ದೇನೆ. ಅಲ್ಲಿ ಹಿಂದುಳಿದ ವರ್ಗದವರು ಪಿಸಿಸಿ ಅಧ್ಯಕ್ಷರಾಗಿದ್ದಾರೆ. ಬೇರೆ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಅಧ್ಯಕ್ಷರ ಬದಲಾವಣೆ ಆಗುತ್ತದೆ ಎಂದರು.

ಇದೇ ವೇಳೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ, ಈ ಬಗ್ಗೆ ನಿರ್ದಿಷ್ಟವಾಗಿ ನಾನು ಹೇಳಲು ಸಾಧ್ಯವಾಗುವುದಿಲ್ಲ. ಬಾಕಿ ಉಳಿದ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಬದಲಾವಣೆ ಆಗುತ್ತದೆ. ಇನ್ನೆರಡು ದಿನಗಳಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಇನ್ನು ಎಂಟು ದಿನಗಳಲ್ಲಿ ನಮ್ಮಿಂದಲೇ ಪ್ರಕಟಣೆ ಹೊರ ಬೀಳಲಿದೆ ಎಂದು ಸ್ಪಷ್ಟಪಡಿಸಿದರು.

ಇನ್ನು ಸಚಿವರಾದ ಜಿ ಪರಮೇಶ್ವರ, ಸತೀಶ್ ಜಾರಕಿಹೊಳಿ ಭೇಟಿ ಬಗ್ಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಭೇಟಿ ದೊಡ್ಡ ಮಾತಾ? ಎಂದು ಪ್ರಶ್ನೆ ಮಾಡಿದರು. ನಾನು ಎಐಸಿಸಿ ಅಧ್ಯಕ್ಷ, ಎಲ್ಲರೂ ಬಂದು ಭೇಟಿ ಮಾಡುತ್ತಾರೆ ಇದು ದೊಡ್ಡ ಮಾತಾ? ನಮ್ಮ‌ ರಾಜ್ಯದವರಿಗೆ ಬೇಗ ಅಪಾಯಿಂಟಮೆಂಟ್ ಸಿಗುತ್ತೆ, ಬಂದವರಿಗೆ ಬೇಡ ಅನ್ನಲು ಆಗುತ್ತಾ? ಪರಮೇಶ್ವರ್ ಬರ್ತಾರೆ, ಡಿಕೆ ಶಿವಕುಮಾರ ಬರ್ತಾರೆ, ಸತೀಶ್ ಜಾರಕಿಹೊಳಿ ಬರ್ತಾರೆ, ಸಿದ್ದರಾಮಯ್ಯ ಫೋನ್ ಮಾಡ್ತಾರೆ ಇದರಲ್ಲಿ ವಿಶೇಷ ಏನಿಲ್ಲ ಎಂದರು.

No Comments

Leave A Comment