.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಮಂಗಳೂರು: ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಐಟಿ ದಾಳಿ

ಮಂಗಳೂರು: ನಗರದಲ್ಲಿ ನಾಲ್ಕು ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಮಂಗಳೂರಿನ ಪಾನ್ ಮಸಾಲಾ,ಸುಪಾರಿ ಮತ್ತು ಇತರ ಗುಟ್ಕಾ ಉತ್ಪನ್ನಗಳ ವ್ಯವಹಾರಗಳನ್ನು ನಡೆಸುತ್ತಿರುವ ನಾಲ್ಕು ಟ್ರೇಡಿಂಗ್ ಕಂಪೆನಿಗಳ ಮೇಲೆ ಐಟಿ ಅಧಿಕಾರಿಗಳ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಟ್ರೇಡಿಂಗ್ ಕಂಪೆನಿಗಳ ಕಚೇರಿ, ಗೋಡಾನ್ ಹಾಗೂ ಈ ಕಂಪೆನಿಗಳ ಮಾಲಕರ ಮನೆಗಳ ಮೇಲೂ ದಾಳಿ ಐಟಿ ಅಧಿಕಾರಿಗಳು ನಡೆಸಿದ್ದಾರೆ. ಈ ಟ್ರೇಡಿಂಗ್ ಕಂಪೆನಿಗಳು ಪಾನ್ ಮಸಾಲಾ, ಸುಪಾರಿ ಮತ್ತು ಇತರ ಗುಟ್ಕಾ ಉತ್ಪನ್ನಗಳ ವ್ಯವಹಾರ ನಡೆಸುತ್ತಿವೆ ಎಂದು ತಿಳಿದುಬಂದಿದೆ.

No Comments

Leave A Comment