ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

HAL ನಿರ್ಮಿತ ಸ್ವದೇಶಿ ತರಬೇತಿ ವಿಮಾನದಲ್ಲಿ ತೇಜಸ್ವಿ ಸೂರ್ಯ ಹಾರಾಟ

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ-2025 ರಲ್ಲಿ ವೈಮಾನಿಕ ಪ್ರದರ್ಶನದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಗುರುವಾರ ಸ್ವದೇಶಿ ನಿರ್ಮಿತ ತರಬೇತಿ ವಿಮಾನವಾದ HTT-40ಯಲ್ಲಿ ಹಾರಾಟ ನಡೆಸಿದರು.

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(HAL) ನಿರ್ಮಿಸಿದ ವಿಮಾನದಲ್ಲಿ ತೇಜಸ್ವಿ ಸೂರ್ಯ ಸುಮಾರು 30 ನಿಮಿಷಗಳ ಕಾಲ ಹಾರಾಟ ನಡೆಸುವ ಮೂಲಕ ಗಮನ ಸೆಳೆದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಸಂಸದ, HAL ಬೆಂಗಳೂರಿನ ಹೆಮ್ಮೆ ಮತ್ತು ಭಾರತದ ಹೆಮ್ಮೆ ಮತ್ತು ಭಾರತದ ವೈಮಾನಿಕ ಪ್ರಗತಿಯ ಸಂಕೇತ ಎಂದು ಶ್ಲಾಘಿಸಿದರು.

“ಇಂದು ನನಗೆ ನಮ್ಮದೇ HAL ನಿರ್ಮಿಸಿದ HTT 40 ನಲ್ಲಿ ಹಾರಾಟ ನಡೆಸುವ ಅವಕಾಶ ಸಿಕ್ಕಿತು. HAL ಭಾರತದ ಹೆಮ್ಮೆ. ಇದು ಬೆಂಗಳೂರಿನ ಹೆಮ್ಮೆ” ಎಂದು ಹೇಳಿದರು.

2012 ರಲ್ಲಿ ಯುಪಿಎ ಸರ್ಕಾರವು ಸ್ವಿಸ್ ಕಂಪನಿಯಿಂದ ತರಬೇತಿ ಜೆಟ್‌ಗಳನ್ನು ಖರೀದಿಸಿತ್ತು. ಇದರಿಂದ ದೇಶಿಯ ವಿಮಾನ ತಯಾರಿಕಾ ಯೋಜನೆ ಭಾರಿ ಹಿನ್ನೆಡೆ ಅನುಭವಿಸಿತ್ತು. ಆದರೆ 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಎಚ್ಎಎಲ್ ಗೆ ಉತ್ತೇಜನ ಲಭಿಸಿದೆ ಎಂದು ತೇಜಸ್ವಿ ಸೂರ್ಯ ತಿಳಿಸಿದರು.

kiniudupi@rediffmail.com

No Comments

Leave A Comment