ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ವಿಶ್ವ ಗೀತಾ ರಸಪ್ರಶ್ನೆ ಸ್ಪರ್ಧೆ: ವಿನಯ ಕುಮಾರ್- ಪಯೋಜ ಪ್ರಥಮ

ಉಡುಪಿ, ಫೆ.13: ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಗೀತೋತ್ಸವದ ಅಂಗವಾಗಿ ಏರ್ಪಡಿಸಲಾದ ವಿಶ್ವ ಗೀತಾ ರಸಪ್ರಶ್ನೆ ಸ್ಪರ್ಧೆಯ ಸೀನಿಯರ್ ವಿಭಾಗದಲ್ಲಿ ವಿನಯ ಕುಮಾರ್ ಸುರತ್ಕಲ್ ಹಾಗೂ ಜೂನಿಯರ್ ವಿಭಾಗದಲ್ಲಿ ಪಯೋಜ ಕಂಬಲೂರು ಪ್ರಥಮ ಬಹುಮಾನ ಗೆದ್ದುಕೊಂಡಿದ್ದಾರೆ.

ಸೀನಿಯರ್ ವಿಭಾಗದಲ್ಲಿ ಸುಮಿತ್ ಪ್ರಹ್ಲಾದ್ ಚನ್ನಪಟ್ಟಣ ದ್ವಿತೀಯ, ಅನಿಲ್ ಕುಮಾರ್ ಚಿಂತಾಮಣಿ ತೃತೀಯ, ಸೌಮ್ಯ ಸಿ.ಎಸ್. ಮಂಗಳೂರು ಹಾಗೂ ಲಕ್ಷ್ಮೀ ಸತೀಶ್ ಬೆಂಗಳೂರು ನಾಲ್ಕನೇ ಸ್ಥಾನ ಗೆದ್ದುಕೊಂಡರು. ಜೂನಿಯರ್ ವಿಭಾಗದಲ್ಲಿ ಮಾಯಾಂಕ್ ಭಟ್ ಬೆಂಗಳೂರು ದ್ವೀತಿಯ, ಕುಮಾರಿ ಅವ ತಮಂಗ್ ಪಶ್ಚಿಮ ಬಂಗಾಳ ತೃತೀಯ ಮತ್ತು ಶ್ರೀಪಾಲ್ ಹೊಸಬೆಟ್ಟು ಮಂಗಳೂರು ನಾಲ್ಕನೇ ಸ್ಥಾನ ಪಡೆದುಕೊಂಡರು.

ಫೆ.21ರಂದು ರಾಜಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಆಯ್ದ ವಿಜೇತರಿಗೆ ಪಾರಿತೋಷಕ ಮತ್ತು ನಗದು ಬಹುಮಾನ ನೀಡಲಾಗುವುದು. ಪ್ರಥಮ ದ್ವಿತೀಯ ತೃತೀಯ ಬಹುಮಾನ ವಿಜೇತರು ಕ್ರಮವಾಗಿ 1ಲಕ್ಷ ರೂ.75ಸಾವಿರ ರೂ., 50ಸಾವಿರ ರೂ. ನೀಡಲಾಗುವುದು. ಆಯ್ಕೆಗೊಂಡ ಎಲ್ಲರಿಗೂ ಸಮಾಧಾನಕರ ಬಹುಮಾನಗಳನ್ನು ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

kiniudupi@rediffmail.com

No Comments

Leave A Comment