ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಕೇರಳದ ದೇವಾಲಯದ ಉತ್ಸವದಲ್ಲಿ ರೊಚ್ಚಿಗೆದ್ದ ಆನೆಗಳು; ಮೂವರು ಸಾವು, 36 ಜನರಿಗೆ ಗಾಯ
ಕೋಝಿಕ್ಕೋಡ್: ಕೇರಳ ರಾಜ್ಯದಲ್ಲಿ ಮನುಷ್ಯರ ಮೇಲೆ ಆನೆಗಳ ದಾಳಿ ಮುಂದುವರೆದಿದ್ದು, ಕೋಝಿಕ್ಕೋಡ್ನ ಕೊಯಿಲಾಂಡಿಯಲ್ಲಿ ದೇವಾಲಯದ ಉತ್ಸವಕ್ಕಾಗಿ ತಂದಿದ್ದ ಆನೆಗಳು ಇದ್ದಕ್ಕಿದ್ದಂತೆ ಓಡಲಾರಂಭಿಸಿದ ಹಿನ್ನೆಲೆಯಲ್ಲಿ 3 ಜನರು ಸಾವನ್ನಪ್ಪಿದ್ದಾರೆ.
ಕೊಯ್ಲಾಂಡಿಯ ಕುರುವಂಗಾಡ್ನಲ್ಲಿರುವ ಮಣಕ್ಕುಳಂಗರ ದೇವಾಲಯದಲ್ಲಿ ನಡೆದ ಉತ್ಸವದ ಸಂದರ್ಭದಲ್ಲಿ ಆನೆಗಳು ಕೋಪಗೊಂಡು ಓಡಿಹೋದ ನಂತರ ಮೂವರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 36 ಜನರು ಗಾಯಗೊಂಡಿದ್ದಾರೆ.
ಪೀತಾಂಬರನ್ ಮತ್ತು ಗೋಕುಲ್ ಎಂಬ ಎರಡು ಆನೆಗಳು ರೊಚ್ಚಿಗೆದ್ದ ನಂತರ ಈ ಘಟನೆ ನಡೆಯಿತು. ಉತ್ಸವಕ್ಕೆ ತಂದಿದ್ದ ಒಂದು ಆನೆ ಆಕ್ರಮಣಕಾರಿಯಾಗಿ ಮತ್ತೊಂದು ಆನೆಯನ್ನು ಕೆರಳಿಸಿತು. ಇದು ಘರ್ಷಣೆಗೆ ಕಾರಣವಾಯಿತು. ಆನೆಗಳ ಕಾಲಡಿಗೆ ಸಿಲುಕಿ ಅನೇಕರಿಗೆ ಗಾಯಗಳಾಗಿವೆ.