ಮುಂಬೈ: ವಾಟರ್​ಮೆಲನ್ ನಲ್ಲಿ ಕಾದಿದ್ದ ಜವರಾಯ; ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು....ಮಂಗಳೂರು ಕುಕ್ಕರ್‌ ಬಾಂಬ್ ಬ್ಲಾಸ್ಟ್ ಪ್ರಕರಣ: ಉಗ್ರ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್...

ಕೇರಳದ ದೇವಾಲಯದ ಉತ್ಸವದಲ್ಲಿ ರೊಚ್ಚಿಗೆದ್ದ ಆನೆಗಳು; ಮೂವರು ಸಾವು, 36 ಜನರಿಗೆ ಗಾಯ

ಕೋಝಿಕ್ಕೋಡ್: ಕೇರಳ ರಾಜ್ಯದಲ್ಲಿ ಮನುಷ್ಯರ ಮೇಲೆ ಆನೆಗಳ ದಾಳಿ ಮುಂದುವರೆದಿದ್ದು, ಕೋಝಿಕ್ಕೋಡ್‌ನ ಕೊಯಿಲಾಂಡಿಯಲ್ಲಿ ದೇವಾಲಯದ ಉತ್ಸವಕ್ಕಾಗಿ ತಂದಿದ್ದ ಆನೆಗಳು ಇದ್ದಕ್ಕಿದ್ದಂತೆ ಓಡಲಾರಂಭಿಸಿದ ಹಿನ್ನೆಲೆಯಲ್ಲಿ 3 ಜನರು ಸಾವನ್ನಪ್ಪಿದ್ದಾರೆ.

ಕೊಯ್ಲಾಂಡಿಯ ಕುರುವಂಗಾಡ್‌ನಲ್ಲಿರುವ ಮಣಕ್ಕುಳಂಗರ ದೇವಾಲಯದಲ್ಲಿ ನಡೆದ ಉತ್ಸವದ ಸಂದರ್ಭದಲ್ಲಿ ಆನೆಗಳು ಕೋಪಗೊಂಡು ಓಡಿಹೋದ ನಂತರ ಮೂವರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 36 ಜನರು ಗಾಯಗೊಂಡಿದ್ದಾರೆ.

ಪೀತಾಂಬರನ್ ಮತ್ತು ಗೋಕುಲ್ ಎಂಬ ಎರಡು ಆನೆಗಳು ರೊಚ್ಚಿಗೆದ್ದ ನಂತರ ಈ ಘಟನೆ ನಡೆಯಿತು. ಉತ್ಸವಕ್ಕೆ ತಂದಿದ್ದ ಒಂದು ಆನೆ ಆಕ್ರಮಣಕಾರಿಯಾಗಿ ಮತ್ತೊಂದು ಆನೆಯನ್ನು ಕೆರಳಿಸಿತು. ಇದು ಘರ್ಷಣೆಗೆ ಕಾರಣವಾಯಿತು. ಆನೆಗಳ ಕಾಲಡಿಗೆ ಸಿಲುಕಿ ಅನೇಕರಿಗೆ ಗಾಯಗಳಾಗಿವೆ.

No Comments

Leave A Comment